Connect with us

    DAKSHINA KANNADA

    ಪುತ್ತೂರು: ಆಗಸ್ಟ್ 22 ರಂದು ಪುತ್ತೂರಿನಿಂದ ವಿಟ್ಲಕ್ಕೆ ಕಾಂಗ್ರೆಸ್ ನಡಿಗೆ….

    ಪುತ್ತೂರು, ಆಗಸ್ಟ್ 18: ಪುತ್ತೂರು ಬ್ಲಾಕ್ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಗಸ್ಟ್ 22 ರಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿದರು.

    ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಶಿಕ್ಷೆ ಅನುಭವಿಸಿದ ಸ್ವಾತಂತ್ರ್ಯ ಸೇನಾನಿಗಳನ್ನು ಮತ್ತೆ ಯುವ ಜನತೆಗೆ ಪರಿಚಯಿಸುವ ಕಾರ್ಯವನ್ನು ಕಾಂಗ್ರೇಸ್ ಪಕ್ಷ ಸ್ವಾತಂತ್ರ್ಯ ನಡಿಗೆಯ ಮೂಲಕ ಮಾಡಲಿದೆ ಎಂದ ಅವರು ಪುತ್ತೂರಿನ ದರ್ಬೆ ವೃತ್ತದಿಂದ ಆಗಸ್ 22 ರಂದು ಬೆಳಿಗ್ಗೆ 9 ಗಂಟೆಗೆ ನಡಿಗೆಗೆ ಚಾಲನೆ ನೀಡಲಾಗುವುದು.

    ಪುತ್ತೂರಿನಿಂದ ವಿಟ್ಲವರೆಗೆ ಸುಮಾರು 15 ಕಿಲೋಮೀಟರ್ ದೂರದ ಈ ನಡೆಗೆಯಲ್ಲಾ ಜಿಲ್ಲಾ ಕಾಂಗ್ರೇಸ್ ನ ಎಲ್ಲಾ ಮುಖಂಡರು ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಗೆ ವಿಟ್ಲದಲ್ಲಿ ನಡಿಗೆಯ ಸಮಾರೋಪ ಸಮಾರಂಭ ನಡೆಯಲಿದ್ದು, ಸಭೆಯಲ್ಲಿ ಕಾಂಗ್ರೇಸ್ ಮುಖಂಡ ನಿಕೇತ್ ರಾಜ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು. ನಡಿಗೆಯಲ್ಲಿ ಸುಮಾರು 2 ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply