Connect with us

    DAKSHINA KANNADA

    ಪುತ್ತೂರು: ಹಿಂಜಾವೇ ಮುಖಂಡರ ಗಡಿಪಾರಿಗೆ ಕೋರ್ಟ್ ತಡೆ..!

    ಮಂಗಳೂರು : ಹಿಂದೂ ಜಾಗರಣಾ ವೇದಿಕೆ ಮುಖಂಡ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್​ಗೆ ಮಾನ್ಯ ನ್ಯಾಯಾಲಯ ತಡೆ ನೀಡಿದೆ.

    ಹಿಂಜಾವೇ ಜಿಲ್ಲಾ ಸಹ ಸಂಯೋಜಕ ದಿನೇಶ್​ ಪಂಜಿಗ ಮತ್ತು ವೇಣೂರು ವಲಯದ ಮುಖಂಡ ಯಶೋಧರರಿಗೆ, ಕರ್ನಾಟಕ ಪೊಲೀಸ್​ ಕಾಯ್ದೆ ಕಲಂ 55 ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್​ ಠಾಣಾ ವ್ಯಾಪ್ತಿಗೆ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಉಪವಿಭಾಗೀಯ ದಂಡಾಧಿಕಾರಿ ನೋಟಿಸ್​ ಜಾರಿ ಮಾಡಿದ್ದರು. ಉಪವಿಭಾಗೀಯ ದಂಡಾಧಿಕಾರಿಯ ನೋಟಿಸ್​ ಜಾರಿ ಕ್ರಮವನ್ನು ಪ್ರಶ್ನಿಸಿ ದಿನೇಶ್ ಪಂಜಿಗ‌ ಹಾಗೂಯಶೋಧರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮಹೇಶ್ ಕಜೆ ನೋಟಿಸ್​ ಜಾರಿ ಮಾಡಿದ್ದು ಸರಿಯಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು . ಅರ್ಜಿದಾರರ ಪರವಾದ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಗಡಿಪಾರು ನೊಟೀಸ್​ಗೆ ತಡೆಯಾಜ್ಞೆ ನೀಡಿದ್ದಾರೆ.ಮತ್ತು ಆಪಾದಿತರ ವಿರುದ್ಧದ ಎಲ್ಲ ಕಡತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ.

     

     

    Share Information
    Advertisement
    Click to comment

    You must be logged in to post a comment Login

    Leave a Reply