DAKSHINA KANNADA
ಪುತ್ತೂರು: ಚಲಿಸುತ್ತಿದ್ದ ಕಾರಿನ ಉರುಳಿ ಬಿದ್ದ ಮರ-ಪುಟ್ಟ ಮಗು ಸಹಿತ ಐವರು ಅಪಾಯದಿಂದ ಪಾರು.
ಪುತ್ತೂರು, ಜುಲೈ 13: ಮಾಣಿ-ಮೈಸೂರು ರಾ.ಹೆದ್ದಾರಿ 275 ರ ಸಂಟ್ಯಾರ್ ಸೇತುವೆ ಬಳಿ ಕಾರೊಂದರ ಮೇಲೆ ಮರ ಬಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 13 ರಂದು ಮದ್ಯಾಹ್ನ ಬೀಸಿದ ಭಾರೀ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಮುರಿದು ಬಿದ್ದಿದೆ.
ಕಾರು ಭಾಗಶಃ ಜಖಂಗೊಂಡಿದ್ದು ಕಾರಿನಲ್ಲಿದ್ದ ಮಗು ಸಹಿತ, ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಆತೂರು ನಿವಾಸಿ ಆಸಿಫ್ ಎಂಬವರು ಚಲಾಯಿಸುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ.
ಆಸಿಫ್ರವರು ಕುಂಬ್ರಕ್ಕೆ ಬಂದು ತಿರುಗಿ ಪುತ್ತೂರಿಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಕಾರಿನಲ್ಲಿ ಆಸಿಫ್ರವರ ಪತ್ನಿ, ಅತ್ತೆ, ನಾದಿನಿ ಹಾಗೂ ಅವರ 1.5 ವರ್ಷದ ಮಗು ಪ್ರಯಾಣಿಸುತ್ತಿದ್ದರೆನ್ನಲಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದು ವರದಿಯಾಗಿದೆ.
You must be logged in to post a comment Login