Connect with us

    DAKSHINA KANNADA

    ಪುತ್ತೂರು – ಜೋಸ್ ಆಲುಕ್ಕಾಸ್ ನಿಂದ ಚಿನ್ನಾಭರಣ ಎಗರಿಸಿದ ಕಳ್ಳಿಯರು ಪೊಲೀಸ್ ಬಲೆಗೆ

    ಪುತ್ತೂರು ಸೆಪ್ಟೆಂಬರ್ 13: ಚಿನ್ನಾಭರಣ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಪುತ್ತೂರು ಹಿಂದೂಸ್ತಾನ್ ಕಮರ್ಶಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಜೋಸ್ ಆಲುಕ್ಕಾಸ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಮೂವರು ಕಳ್ಳಿಯರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


    ಬಂಧಿತರನ್ನು ದಾವಣಗೆರೆ ಜಿಲ್ಲೆ ನಿವಾಸಿಗಳಾದ ಬೀಬಿಜಾನ್ , ಹುಸೇನ್ ಬಿ , ಜೈತುಂಬಿ ಎಂದು ಗುರುತಿಸಲಾಗಿದೆ. ಇವರು ಸೆಪ್ಟೆಂಬರ್ ೧ ರಂದು ಜೋಸ್ ಅಲುಕಾಸ್ ಗೆ ಬಂದು 3.065 ಗ್ರಾಂ ತೂಕದ 13,400/- ರೂ ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ 2,60,400/- ಮೌಲ್ಯದ ಕಿವಿಯ ಚಿನ್ನಾಭರಣವನ್ನು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು.


    ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು.‌ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply