DAKSHINA KANNADA
ಪುತ್ತೂರು ಕಂಬಳ ವಿರುದ್ದ ಅಪಪ್ರಚಾರಕ್ಕೆ ದೇವರ ಮೊರೆ ಹೋದ ಕಂಬಳ ಸಮಿತಿ…!!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಮಾಡಿದ್ದಾರೆ.
ಬುಧವಾರ ಮಧ್ಯಾಹ್ನ ಮಹಾಪೂಜೆಗೆ ಮುನ್ನ ಕಂಬಳ ಸಮಿತಿ ಗೌರವಾಧ್ಯಕ್ಷರಾದ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿತು. ಕಂಬಳ ಗದ್ದೆಯಲ್ಲಿ ನಟಿಯೊಬ್ಬಳ ಜತೆ ಯಾರೋ ವ್ಯಕ್ತಿ ಅಸಭ್ಯ ವರ್ತನೆ ಮಾಡಿದ್ದಾನೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿ ಫೋಟೋ, ವೀಡಿಯೋ ವೈರಲ್ ಮಾಡಲಾಗುತ್ತಿದೆ. ಕಂಬಳ ಸಮಿತಿಯನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸುವ ಯತ್ನ ಮಾಡಲಾಗುತ್ತಿದೆ. ನಮಗೆ ಮಹಾಲಿಂಗೇಶ್ವರ ಸಾನಿಧ್ಯವೇ ನ್ಯಾಯಾಲಯ. ದೇವರು ನಮಗೆ ನ್ಯಾಯ ನೀಡಬೇಕು ಎಂದು ಪ್ರಾರ್ಥಿಸಿದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಅರ್ಚಕ ವಸಂತ ಕೆದಿಲಾಯ ಪ್ರಾರ್ಥನೆ ಸಲ್ಲಿಸಿ, ಅನೇಕ ವರ್ಷಗಳಿಂದ ಕಂಬಳ ಒಳ್ಳೆ ರೀತಿಯಲ್ಲಿ ನಡೆಯುತ್ತಾ ಬಂದಿದೆ. ಗೊತ್ತಿದ್ದೋ ಗೊತ್ತಿಲ್ಲದೆಯೋ ಅಹಿತಕರ ಘಟನೆ ನಡೆದಿದ್ದರೆ ಅದಕ್ಕೆ ಮಹಾಲಿಂಗೇಶ್ವರ ದೇವರು ನ್ಯಾಯ ನೀಡಲಿ, ಬುದ್ಧಿ ನೀಡಲಿ. ಭವಿಷ್ಯದಲ್ಲಿ ಪುತ್ತೂರು ಕಂಬಳ ಯಾವುದೇ ವಿಘ್ನಗಳಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದರು.
You must be logged in to post a comment Login