Connect with us

    DAKSHINA KANNADA

    ಪುತ್ತೂರು – ಸಂಬಳ ನೀಡದ ಕೆ.ಎಸ್.ಆರ್.ಟಿ.ಸಿ ವಿರುದ್ಧ ಅಮರಣಾಂತಿಕ ಉಪವಾಸ

    ಪುತ್ತೂರು ಅಕ್ಟೋಬರ್ 25: ಸಂಬಳ ನೀಡದ ಕೆಎಸ್.ಆರ್.ಟಿ.ಸಿ ಕೇಂದ್ರ ಕಚೇರಿಯ ಅಧಿಕಾರಿಗಳ ವಿರುದ್ದ ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಮರಣಾಂತಿಕ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.


    ಪುತ್ತೂರಿನ ಮಿನಿ ವಿಧಾನಸೌಧದ ಮುಂದೆ ಈ ಉಪವಾಸ ಸತ್ಯಾಗ್ರಹವನ್ನು ಪುತ್ತೂರು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಕೆಎಸ್ ಆರ್ ಟಿಸಿ ಪುತ್ತೂರು ಘಟಕದ ಸಿಬ್ಬಂದಿಗಳು ಆರಂಭಿಸಿದ್ದಾರೆ. ತಮ್ಮ ಬೇಡಿಕೆ ಈಡೇರಿಸುವ ತನಕ ಉಪವಾಸ ಸತ್ಯಾಗ್ರಹ ಮುಂದುವರಿಸಲು ತೀರ್ಮಾನಿಸಿದ್ದಾರೆ.


    ಅಕ್ಟೋಬರ್ ನಲ್ಲಿ ಅರ್ಧ ಸಂಬಳ ನೀಡಿದ್ದು, ಬಳಿಕ ಸಂಬಳವನ್ನೇ ನೀಡದೆ ಕೇಂದ್ರ ಕಛೇರಿಯ ಅಧಿಕಾರಿಗಳು ನೌಕರರ ವಿರುದ್ಧ ದೌರ್ಜನ್ಯ ಎಸಗುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೇರಿದಂತೆ ಕೆ.ಎಸ್.ಆರ್.ಟಿ.ಸಿ ಯ ಉನ್ನತ ಅಧಿಕಾರಿಗಳೂ ಮನವಿ ಮಾಡಲಾಗಿದೆ. ಆದರೂ ಅಧಿಕಾರಿಗಳು ಮನವಿಗೆ ಸ್ಪಂದಿಸದ ಹಿನ್ನಲೆ ಉಪವಾಸ ಸತ್ಯಾಗ್ರಹ ಪ್ರತಿಭಟನೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply