Connect with us

DAKSHINA KANNADA

ಪುತ್ತೂರು : ಕಾನೂನು ಸುವ್ಯವಸ್ಥೆ ಸಂಪೂರ್ಣ ಫೇಲ್,ಅಕ್ಷಯ ಕುಟುಂಬಕ್ಕೆ ರೂ.1 ಕೋಟಿ ಪರಿಹಾರಕ್ಕೆ ಮಠಂದೂರು ಆಗ್ರಹ..!

ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಅಕ್ಷಯ ಮನೆಗೆ ಹಲವು ಮುಖಂಡರ ಭೇಟಿ ನೀಡಿದ್ದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಕೂಡ ಭೇಟಿ ನೀಡಿ ಕುಟುಂಬಸ್ತರಿಗೆ ಸಾಂತ್ವಾನ ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಪುತ್ತೂರಿನಲ್ಲಿ ಎರಡು ಜೀವ ಬಲಿಯಾಗಿದೆ. ಕಾಂಗ್ರೇಸ್ ಸರಕಾರ ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾತ್ರಿ ಪೊಲೀಸ್ ಬೀಟ್ ಹೆಚ್ಚು ಪರಿಣಾಮಕಾರಿಯಾಗಿ ಮಾಡುವಲ್ಲಿ ಸರಕಾರ ಪರೋಕ್ಷವಾಗಿ ವೈಪಲ್ಯ ಆಗಿದೆ. ಹುಲಿ ಕುಣಿತಕ್ಕೆ ತನ್ನದೆ ಆದ ಛಾಪನ್ನು ಕೊಟ್ಟು ಎಲ್ಲಾ ಯುವಕರಿಗೆ ನಾಯಕತ್ವ ನೀಡಿ, ಸಾಂಸ್ಕೃತಿಕ ಕ್ಷೇತ್ರಕ್ಕೆ ಕೊಡುಗೆ ಕೊಟ್ಟ ಅಕ್ಷಯ ಕಲ್ಲೇಗ ಅವರ ಹತ್ಯೆಯಾಗಿದೆ. ಅವರ ಮರಣ ಈ ರೀತಿ ಆಗಲಿದೆ ಎಂದು ಯಾರೂ ಭಾವಿಸಿರಲಿಲ್ಲ. ಈ ಹತ್ಯೆಯ ಹಿಂದೆ ಯಾರ್ಯಾರು ಇದ್ದಾರೋ ಇದನ್ನು ಪತ್ತೆ ಹಚ್ಚುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕು ಮತ್ತು ಕಲಾವಿದ ಅಕ್ಷಯ ಕುಟುಂಬಕ್ಕೆ ರೂ.1 ಕೋಟಿ ಪರಿಹಾರ ಕೊಡಬೇಕು ಎಂದು ಮಠಂದೂರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply