Connect with us

    DAKSHINA KANNADA

    ಪುತ್ತೂರಿನಿಂದ ಮೋದಿ ರೋಡ್ ಶೋ ಗೆ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿ

    ಪುತ್ತೂರು ಎಪ್ರಿಲ್ 13: ಮಂಗಳೂರಿನಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಗೆ ಪುತ್ತೂರಿನಿಂದ 5 ಸಾವಿರಕ್ಕೂ ಮಿಕ್ಕಿದ ಮೋದಿ ಅಭಿಮಾನಿಗಳು ಭಾಗಿಯಾಗಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.


    ಪುತ್ತೂರಿನಲ್ಲಿ ಮಾತನಾಡಿದ ಅವರು ಪುತ್ತೂರು ವಿಧಾನಸಭೆಯ ಎಲ್ಲಾ ಬೂತ್ ಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸ್ವ ಇಚ್ಛೆಯಿಂದ ತಮ್ಮ ತಮ್ಮ ವಾಹನದಲ್ಲಿ ಮಂಗಳೂರಿಗೆ ತೆರಳಲಿದ್ದಾರೆ. ಅಲ್ಲದೆ ತಾವೇ ಹಣ ಹೊಂದಿಸಿ ಬಸ್ ಮಾಡಿ ಮಂಗಳೂರಿಗೆ ಕಾರ್ಯಕರ್ತರು ತೆರಳಲಿದ್ದಾರೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4 ಲಕ್ಷಕ್ಕೂ ಮಿಕ್ಕಿದ ಮತಗಳಲ್ಲಿ ಗೆಲ್ಲಿಸುವ ಕಾರ್ಯಕ್ರಮದ ಮುನ್ನುಡಿಯಾಗಲಿದ್ದು, ಕೇಂದ್ರದಲ್ಲಿ ಬಿಜೆಪಿ 400 ಕ್ಕೂ ಮಿಕ್ಕಿ ಸ್ಥಾನ ಗೆಲ್ಲಲಿದ್ದು,ಆ ಸ್ಥಾನಗಳಲ್ಲಿ ದಕ್ಷಿಣಕನ್ನಡ ಸ್ಥಾನವೂ ಒಂದಾಗಲಿದೆ ಎಂದರು.

    ಕಾಂಗ್ರೇಸ್ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೋಲಿನ ಹತಾಶೆಯಲ್ಲಿದ್ದು, ಈವರೆಗೆ ಕಾಂಗ್ರೇಸ್ ಗೆ ಜಿಲ್ಲೆಯಲ್ಲಿ ಒಂದು ಜಿಲ್ಲಾ ಮಟ್ಟದ ಸಮಾವೇಶ ಮಾಡಲು ಸಾಧ್ಯವಾಗಿಲ್ಲ. ಪುತ್ತೂರಿನಲ್ಲಿ ಎಪ್ರಿಲ್ 16 ರಂದು ಮುಖ್ಯಮಂತ್ರಿ ಸಿದ್ಧಾರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೋಡ್ ಶೋ ನಡೆಸಲಿದ್ದಾರೆ. ಸೋಲಿನ ಹತಾಶೆ ಕಾಂಗ್ರೇಸ್ ಅನ್ನು ಕಾಡುತ್ತಿದೆ. ಜಿಲ್ಲೆಯಲ್ಲಿ ಕಾಂಗ್ರೇಸ್ ಒಡೆದ ಮನೆಯಾಗಿದೆ. ಕಾಂಗ್ರೆಸ್ ಈಗಾಗಲೇ ಬಿಜೆಪಿ ವಿರುದ್ಧ ಸೋಲನ್ನು ಒಪ್ಪಿಕೊಂಡಿದೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply