Connect with us

    BANTWAL

    ಪುತ್ತೂರು : ಪರಿಯಲಾತಡ್ಕ ಪುಣಚ – ಕೃಷ್ಣಗಿರಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿತ : 6 ಮಂದಿ ಕಾರ್ಮಿಕರು ಗಂಭೀರ..!

    ಪುತ್ತೂರು : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ ಏಳು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿ ಎಂಬಲ್ಲಿ ಸೋಮವಾರ ನಡೆದಿದೆ.

     

    ಈ ಸೇತುವೆಯ ಕೊನೆಯ ಹಂತದ ಸ್ಲ್ಯಾಬ್ ನಿರ್ಮಾಣಕ್ಕಾಗಿ ಕಾಂಕ್ರಿಟ್ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕಾಂಕ್ರಿಟ್ ಕಾಮಗಾರಿಗಾಗಿ ಸೇತುವೆ ತಳಭಾಗದಿಂದ ತಾತ್ಕಾಲಿಕವಾಗಿ ಅಳವಡಿಸಿದ್ದ ಕಬ್ಬಿಣದ ಪ್ಲೇಟ್ ಆಕಸ್ಮಿಕವಾಗಿ ಜಾರಿದ್ದರಿಂದ ಕಬ್ಬಿಣದ ರಾಡ್, ಕಾಂಕ್ರಿಟ್ ಮಿಕ್ಸ್ ಎಲ್ಲವೂ ಕುಸಿದುಬಿದ್ದಿದೆ. ಈ ವೇಳೆ ಕೆಲಸದಲ್ಲಿ ನಿರತರಾಗಿದ್ದ ಏಳು ಮಂದಿ ಅದರಡಿಯಲ್ಲಿ ಸಿಲುಕಿದ್ದರು. ಸ್ಥಳದಲ್ಲಿದ್ದ  ಇತರರು ಕೂಡಲೇ ಅವರನ್ನು ರಕ್ಷಿಸಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply