Connect with us

    DAKSHINA KANNADA

    ಪುತ್ತೂರು ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ಸರಣಿ ಅಪಘಾತ..!!

    ಪುತ್ತೂರು ಅಗಸ್ಟ್ 06: ಓವರ್ ಟೇಕ್ ಬರದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಸ್ಕೂಟರ್, ಆಟೋ ರಿಕ್ಷಾ, ಕಾರಿಗೆ ಡಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಉರ್ಲಾಂಡಿ ಬೈಪಾಸ್ ಬಳಿ ಮಧ್ಯಾಹ್ನ ನಡೆದಿದೆ.


    ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಪ್ಟ್ ಕಾರೊಂದು ಬೈಪಾಸ್ ರಸ್ತೆಗೆ ಎಂಟ್ರಿಯಾಗಿ ಮುಂದೆ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ಬಳಿಕ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ಮತ್ತು ಕಾರಿಗೆ ಡಿಕ್ಕಿಯಾಗಿದೆ.ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರೆ ‌ ಬಬಿತಾ ಮತ್ತು ಆಟೋ ರಿಕ್ಷಾದಲ್ಲಿ ಪ್ರಯಾಣಿಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.


    ಅಪಘಾತದಿಂದಾಗಿ ಸ್ಕೂಟರ್, ಆಟೋ ರಿಕ್ಷಾ, ಎರಡೂ ಕಾರುಗಳಿಗೆ ಹಾನಿಯಾಗಿದೆ. ಕಾರು ಚಾಲಕ ಮದ್ಯ ಸೇವನೆ ಮಾಡಿ ಚಲಾಯಿಸಿದ್ದಾನೆ ಎಂದು ತಿಳಿದು ಬಂದಿದೆ.


    ಪುತ್ತೂರು ಸಂಚಾರಿ ಠಾಣೆಯ ಯಸ್. ಐ. ರಾಮನಾಯ್ಕ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply