Connect with us

DAKSHINA KANNADA

ಪುತ್ತೂರು – ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಹಿಂದೂ ಪರ ಸಂಘಟನೆಗಳಿಂದ ಮನವಿ

ಪುತ್ತೂರು ಮಾರ್ಚ್ 23: ಹಿಂದೂ ದೇವಸ್ಥಾನಗಳ ಜಾತ್ರೋತ್ಸವ ಸಂದರ್ಭ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ಹಿಂದೂಪರ ಸಂಘಟನೆಗಳು ಮನವಿ ಸಲ್ಲಿಸಿವೆ.


ಇತ್ತೀಚಿನ ದಿನಗಳಲ್ಲಿ ಅನ್ಯ ಮತೀಯರಿಂದ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅಪವಿತ್ರಗೊಳಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಇಂತಹ ಘಟನೆಗಳು ಹಿಂದೂ ಅಸ್ತಿಕರ ನಂಬಿಕೆಗೆ ಘಾಸಿಯನ್ನುಂಟುಮಾಡಿದೆ. ಹಿಂದೂ ಹಬ್ಬ ಹರಿದಿನಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತಿರುವ ಆ ಸಮುದಾಯದವರು ಹಿಂದುಗಳ ನಂಬಿಕೆಗೆ ಕೊಡಲಿಯೇಟು ಕೊಡುತ್ತಿರುವುದು ವಿಪರ್ಯಾಸ ವೇ ಸರಿ. ಈ ಎಲ್ಲ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ದಿನಗಳಲ್ಲಿ ಶ್ರೀ ಕ್ಷೇತ್ರದಲ್ಲಿ ನಡೆಯುವ ಜಾತ್ರೋತ್ಸವ ಹಾಗು ಇತರೆ ಉತ್ಸವಗಳಲ್ಲಿ ಅನ್ಯಮತೀಯರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದಾಗಿ ವಿನಂತಿ ಮಾಡಲಾಗಿದೆ.


ವಿಶ್ವ ಹಿಂದು ಪರಿಷದ್ ಪುತ್ತೂರು ನಗರ ಮತ್ತು ಗ್ರಾಮಾಂತರ ಪ್ರಖಂಡ ವತಿಯಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಿಗೆ ದೇವಸ್ಥಾನದ ಜಾತ್ರೋತ್ಸವದ ಹಾಗು ಇತರೆ ಉತ್ಸವಗಳ ಸಂದರ್ಭದಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಡೆಸ ಅವಕಾಶ ನೀಡದಿರುವಂತೆ ಕೋರಿ ಮನವಿ ನೀಡಲಾಯಿತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *