DAKSHINA KANNADA
ಪುತ್ತೂರು – ಅಮಿತ್ ಶಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ
ಪುತ್ತೂರು ಫೆಬ್ರವರಿ 09 : ಕೇಂದ್ರ ಗೃಹಮಂತ್ರಿ ಅಮಿತ್ ಶಾ ಪುತ್ತೂರು ಭೇಟಿ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಅಮಿತ್ ಶಾ ಕಾರ್ಯಕ್ರಮದ ಆಮಂತ್ರಣ ಪತ್ರ ವಿತರಣ ಕಾರ್ಯ ಪುತ್ತೂರಿನಲ್ಲಿ ಫೆಬ್ರವರಿ 9 ರಂದು ನಡೆಯಿತು.
ದರ್ಬೆ ವೃತ್ತದಿಂದ ಕಾಲ್ನಡಿಗೆಯ ಮೂಲಕ ಆಮಂತ್ರಣ ಪತ್ರ ವಿತರಣಾ ಜಾಥಾಕ್ಕೆ ಪುತ್ತೂರು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಭಂಡಾರಿ ಚಾಲನೆ ನೀಡಿದರು. ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ನಡೆದ ಈ ಜಾಥಾದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.
ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪುತ್ತೂರಿಗೆ ಆಗಮಿಸಲಿರುವ ಕೇಂದ್ರ ಸಹಕಾರಿ ಸಚಿವರೂ ಆಗಿರುವ ಅಮಿತ್ ಶಾ ರ ಕಾರ್ಯಕ್ರಮ ನಡೆಯುವ ತೆಂಕಿಲದ ವಿವೇಕಾನಂದ ಶಾಲಾ ಮೈದಾನದಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಅಮಿತ್ ಶಾ ಭೇಟಿ ಹಿನ್ನಲೆಯಲ್ಲಿ ಇಡೀ ಪುತ್ತೂರು ನಗರ ಬಿಜೆಪಿ ಮಯವಾಗಿದ್ದು, ಎಲ್ಲೆಡೆ ಬಿಜೆಪಿ ಧ್ವಜ,ಬಂಟಿಕ್ಸ್,ಕಟೌಟ್ ಗಳು ರಾರಾಜಿಸುತ್ತಿವೆ.
You must be logged in to post a comment Login