Connect with us

    DAKSHINA KANNADA

    ಪುತ್ತೂರು ಆರ್ಲಪದವು ಯುವಕ ಆತ್ಮಹತ್ಯೆ

    ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಆರ್ಲಪದವು ನಿವಾಸಿ, ಮೇಸ್ತ್ರಿ ಕೆಲಸ ಮಾಡುತ್ತಿರುವ ಶಿವಪ್ಪ ನಾಯ್ಕ ಎಂಬವರ ಪುತ್ರ ವಿಜಯ ಕುಮಾರ್‌ ಎಸ್(25ವ)  ಜೀವಾಂತ್ಎಂಯ ಮಾಡಿಕೊಂಡ ಯುವಕನಾಗಿದ್ಬದಾನೆ. ವಿಜಯ್ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಕಾರಣ ತಿಳಿದು ಬಂದಿಲ್ಲ. ತಂದೆಯ ಜೊತೆ ತಾನು ಮೇಸ್ತ್ರಿಯಾಗಿ ಕೆಲಸಕ್ಕೆ ತೆರಳುತ್ತಿದ್ದ ವಿಜಯ್ ಗುತ್ತಿಗೆದಾರರಾಗಿಯೂ ಕೆಲಸ ಮಾಡುತ್ತಿದ್ದರು. ಅವಿವಾಹಿತರಾಗಿದ್ದ ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ , ಸಹೋದರ, ಮತ್ತು ಸಹೋದರಿಯನ್ನು ಅಗಲಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply