DAKSHINA KANNADA
ಪುತ್ತೂರು ವಿವೇಕಾನಂದ ಪದವಿ ಕಾಲೇಜ್ ವಿದ್ಯಾರ್ಥಿ ರಸ್ತೆ ಅಪಘಾತಕ್ಕೆ ಬಲಿ..!
ಪುತ್ತೂರು: ರಾಮಕುಂಜ ಗ್ರಾಮದ ಗೋಳಿತ್ತಡಿ ಬಳಿ ಮಾ. 4ರಂದು ರಾತ್ರಿ ಸಂಭವಿಸಿದ ಬೈಕ್ ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20) ಮೃತಪಟ್ಟ ಯುವಕಕನಾಗಿದ್ದಾನೆ. ಶ್ರೀಜಿಸ್ ಅವರು ರಾಮಕುಂಜದ ಶಾರದಾನಗರದಲ್ಲಿರುವ ತನ್ನ ಚಿಕ್ಕಮ್ಮ ಯಮುನಾ ಕೇಶವ ಗಾಂಧಿಪೇಟೆ ಅವರ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಗೋಳಿತ್ತಡಿ ಸಮೀಪ ಮಿನಿ ಗೂಡ್ಸ್ ವಾಹನ ನಡುವೆ ಢಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್ರನ್ನು ಕೂಡಲೇ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಮೃತರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರನ್ನು ಆಗಲಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
You must be logged in to post a comment Login