Connect with us

UDUPI

ಹೆಬ್ಬಾವಿನ ಮರಿಯನ್ನು ರಕ್ಷಣೆ ಮಾಡಿದ ಶ್ರೀ ವಿಶ್ವಪ್ರಸನ್ನ ತೀರ್ಥರು

ಉಡುಪಿ ಜೂನ್ 16: ಉಡುಪಿಯ ಬ್ರಹ್ಮಾವರ ತಾಲೂಕಿನ ಪೇಜಾವರ ಮಠದಲ್ಲಿ ಸಿಲುಕಿಕೊಂಡಿದ್ದ ಹೆಬ್ಬಾವಿನ ಮರಿಯನ್ನು ರಕ್ಷಣೆ ಮಾಡಲಾಗಿದೆ. ಆದರೆ ಈ ಹಾವನ್ನು ರಕ್ಷಣೆ ಮಾಡಿದ್ದು ಉರಗ ತಜ್ಞರಲ್ಲ….ಬದಲಿಗೆ ಪೇಜಾವರ ಮಠದ ಯತಿ ಶ್ರೀ ವಿಶ್ವಪ್ರಸನ್ನ ತೀರ್ಥರು.
ಶ್ರೀಗಳು ಹಾವಿನ ಮರಿಯನ್ನು ಹಿಡಿದು ಸಣ್ಣದೊಂದು ಪೈಪ್ ನಲ್ಲಿ ತುಂಬಿದ್ದಾರೆ. ನಂತರ ಅದನ್ನು ಮಠದ ತೋಟಕ್ಕೆ ತಂದು ಬಿಟ್ಟಿದ್ದಾರೆ.


ಮಾಮೂಲಿಯಾಗಿ ಹೆಬ್ಬಾವು ಹತ್ತಾರು ಸಂಖ್ಯೆಯಲ್ಲಿ ಮೊಟ್ಟೆಯಿಟ್ಟು ಮರಿ ಮಾಡುತ್ತದೆ‌. ಹರಿದಾಡಲು ಶುರು ಮಾಡಿದ ಮೇಲೆ ಮರಿಗಳು ಸ್ವತಂತ್ರ ಆಗುತ್ತವೆ. ಹೀಗೆ ಗುಂಪಿನಿಂದ ಬೇರ್ಪಟ್ಟ ಹೆಬ್ಬಾವಿನ ಮರಿ ಮಠದೊಳಗೆ ಬಂದಿತ್ತು. ದನಗಳ ಹಟ್ಟಿಯತ್ತ ಹೋಗಿತ್ತು. ಹಸುಗಳ ಕಾಲಿನಡಿ ಸಿಲುಕಬಾರದೆಂದ ಸ್ವಾಮೀಜಿ ಹೆಬ್ಬಾವು ಮರಿ ರಕ್ಷಣೆ ಮಾಡಿದ್ದಾರೆ.

ವಿಡಿಯೋ 

Share Information
Continue Reading
Advertisement
Click to comment

Leave a Reply

Your email address will not be published. Required fields are marked *