Connect with us

LATEST NEWS

ಕ್ಲಾಸ್ ರೂಂನಲ್ಲಿ ಹಿಜಬ್ ಬೇಕು ಎನ್ನುವವರಿಗೆ ಷರಿಯತ್ ಕಾನೂನು ಜಾರಿಗೆ ತನ್ನಿ: ರಘುಪತಿ ಭಟ್

ಉಡುಪಿ ಫೆಬ್ರವರಿ 27: ಶಿವಮೊಗ್ಗದ ಭಜರಂಗದಳ ಕಾರ್ಯಕರ್ತನ ಕೊಲೆ ವಿರುದ್ದ ಪ್ರತಿಭಟನಾ ಸಭೆಯಲ್ಲಿ ಉಗ್ರ ಭಾಷಣ ಮಾಡಿದ್ದ ಉಡುಪಿ ಶಾಸಕ ರಘುಪತಿ ಭಟ್ ಮಾಧ್ಯಮಗಳೊಂದಿಗೆ ಮಾತನಾಡಿದ ಹಿಜಬ್ ಬೇಕು ಎನ್ನುವವರಿಗೆ ಷರಿಯತ್ ಕಾನೂನು ಜಾರಿ ಮಾಡಲಿ ಎಂದಿದ್ದಾರೆ.


ಷರಿಯತ್ ಪ್ರಕಾರ ಶಿಕ್ಷೆ ನೀಡಿದರೆ ಹಿಜಬ್ ಧರಿಸಲು ಅವಕಾಶ ಕೊಡಬಹುದು. ಕಠಿಣ ಶಿಕ್ಷೆ ಬೇಡ ತರಗತಿಯಲ್ಲಿ ಹಿಜಬ್ ಬೇಕು ಎಂದರೆ ಅದು ಆಗೂದಿಲ್ಲ. ಭಾರತ ದೇಶದ ಗಾಳಿ ನೀರು ಅನ್ನ ತಿನ್ನುತ್ತಿದ್ದೀರಿ. ದುಬೈ ಸೌದಿಗಳಲ್ಲಿ ಷರಿಯತ್ ಕಾನೂನು ಇದ್ದರೂ ಆಧುನಿಕತೆಯನ್ನು ಒಪ್ಪಿಕೊಳ್ಳಲಾಗುತ್ತಿದೆ. ಹಿಂದೂಗಳ ಕೆಲ ಪದ್ಧತಿ ಕಾಲ-ಕಾಲಕ್ಕೆ ಬದಲಾವಣೆಯಾಗಿದೆ. ನಮ್ಮ ವಿದ್ವಾಂಸರು ಸತಿ ಸಹಗಮನ, ಬಾಲ್ಯವಿವಾಹ, ಅಸ್ಪೃಶ್ಯತೆ ಅಸಮಾನತೆಯನ್ನು ತೊಡೆದುಹಾಕಿದ್ದಾರೆ. ಷರಿಯತ್ ಕಾನೂನು ಒಪ್ಪುವುದಾದರೆ ಎಲ್ಲವನ್ನೂ ಮುಸ್ಲೀಮರಿಗೆ ಕಡ್ಡಾಯ ಮಾಡಿ ಎಂದು ಮನವಿ ಮಾಡಿದರು.

ನಾವು ಭಾರತದ ಸಂವಿಧಾನ ಒಪ್ಪುವವರು. ಸಾಕಷ್ಟು ಒಳ್ಳೆಯ ಮುಸ್ಲಿಮರು ಸಂವಿಧಾನ ಒಪ್ಪುತ್ತಾರೆ. ಕ್ಲಾಸ್ ರೂಂನಲ್ಲಿ ಹಿಜಬ್ ಬೇಕು ಎನ್ನುವವರಿಗೆ ಷರಿಯತ್ ಕಾನೂನು ಜಾರಿಗೆ ತನ್ನಿ. ಕೊಲೆ, ಅತ್ಯಾಚಾರ, ಭಯೋತ್ಪಾದನೆ ಮಾಡಿದಾಗ ಶರಿಯತ್ ಬೇಡ್ವಾ? ಕಠೋರ ಮುಸ್ಲಿಮರು ಈಗಲೇ ಹೇಳಿಕೆಯನ್ನು ನೀಡಬೇಕು. ಅಪರಾಧ ಮಾಡಿದಾಗ ಭಾರತದ ಸಂವಿಧಾನ ಸುಪ್ರೀಂ ಕೋರ್ಟ್ ನೆನಪಾಗುತ್ತದೆ. ಕಾಲೇಜಿನ, ತರಗತಿಯ ಶಿಸ್ತು ಪಾಲಿಸುವ ಮುಸಲ್ಮಾನರಿಗೆ ನಾನು ಈ ಮಾತನ್ನು ಹೇಳುತ್ತಿಲ್ಲ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *