Connect with us

LATEST NEWS

ನಾಳೆ ಮತ್ತೆ ಹಿಜಬ್ ಧರಿಸಿ ಅವಕಾಶ ಕೇಳಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು – ಶಾಸಕ ರಘುಪತಿ ಭಟ್ ಎಚ್ಚರಿಕೆ

ಉಡುಪಿ ಎಪ್ರಿಲ್ 22: ಇಂದಿನಿಂದ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಿಜಬ್ ಗೆ ಅವಕಾಶ ನೀಡಬೇಕೆಂದು ಹಿಜಬ್ ಹೊರಾಟಗಾರ್ತಿಯರು ಒತ್ತಾಯಿಸಿರುವ ಘಟನೆ ನಡೆದಿದ್ದು, ಇದೀಗ ಸ್ಥಳೀಯ ಶಾಸಕ ಹಿಜಬ್ ಹೋರಾಟಗಾರ್ತಿಯರ ವಿರುದ್ದ ಗರಂ ಆಗಿದ್ದು, ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಶಾಸಕರ ರಘುಪತಿ ಭಟ್ ಎಚ್ಚರಿಕೆ ನೀಡಿದ್ದಾರೆ.


ಉಡುಪಿ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಹೋರಾಟಗಾರ್ತಿಯರಿಬ್ಬರು ಹೈಡ್ರಾಮಾ ಸೃಷ್ಟಿಸಿರುವುದಕ್ಕೆ ಆಕ್ರೋಶ ಹೊರ ಹಾಕಿದ ಅವರು, ಇದೊಂದು ಷಡ್ಯಂತ್ರ ಅನ್ನುವುದು ಸಾಬೀತಾಗಿದೆ. ನಿನ್ನೆ ಸಂಜೆಯವರೆಗೆ ಫೋನ್ ಮಾಡಿ ಹಾಲ್ ಟಿಕೆಟ್ ಪಡೆಯಲು ಹೇಳಲಾಗಿತ್ತು. ಬೆಳಗ್ಗಿನವರೆಗೂ ಹಾಲ್ ಟಿಕೆಟ್ ಪಡೆಯಲು ಬರಲಿಲ್ಲ.

ಇಂದು ಬೆಳಗ್ಗೆ 9.30ಕ್ಕೆ ಕಾಲೇಜಿಗೆ ಬಂದವರಿಗೆ ಹಿಜಾಬ್ ತೆಗೆದಿಟ್ಟು ಹೋದರೆ ಮಾತ್ರ ಹಾಲ್ ಟಿಕೆಟ್ ಕೊಡುವುದಾಗಿ ಪ್ರಾಂಶುಪಾಲರು ಹೇಳಿದ್ದರಿಂದ ಹಿಜಾಬ್ ತೆಗೆದು ಹಾಲ್ ಟಿಕೆಟ್ ಪಡದುಕೊಂಡು ಹೋಗಿದ್ದಾರೆ. ಆದರೆ ಬಳಿಕ ಪರೀಕ್ಷಾ ಕೇಂದ್ರಕ್ಕೆ ಹೋಗಿ ಡ್ರಾಮಾ ಮಾಡಿದ್ದಾರೆ ಎಂದರು.
ಈ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜೊತೆ ಮಾತನಾಡಿದ್ದೇನೆ. ನಾಳೆ ಮತ್ತೆ ನಾಟಕ ಮಾಡಿದರೆ ನ್ಯಾಯಾಂಗ ನಿಂದನೆ ಕೇಸು ದಾಖಲಿಸಲು ಹೇಳಿದ್ದೇನೆ. ಅಲ್ಲದೆ, ಯಥಾ ಪ್ರಕಾರ ಮುಂದುವರೆದರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಅವರು ಎಚ್ಚರಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *