Connect with us

LATEST NEWS

ಕಡಿಮೆಯಾದ ಮಳೆ ಅಬ್ಬರ – ನಾಳೆಯಿಂದ ಎಂದಿನಂತೆ ಶಾಲೆ…..!!

ಮಂಗಳೂರು ಜುಲೈ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮಳೆ ಅಬ್ಬರ ಕಡಿಮೆಯಾಗಿದ್ದು, ಹವಮಾನ ಇಲಾಖೆ ನಾಳೆ ಜಿಲ್ಲೆಯಲ್ಲಿ ಆರಂಜ್ ಅಲರ್ಟ್ ಮಾಡಿದ್ದು, ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಶಾಲಾ ಕಾಲೇಜುಗಳು ಮತ್ತೆ ಪ್ರಾರಂಭವಾಗಲಿದೆ.


ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಂಚ ಮಟ್ಟಿನ ಮಳೆ ಕಡಿಮೆಯಾಗಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್‌ನಿಂದ ಆರೆಂಜ್ ಅಲರ್ಟ್‌ ಮಾಡಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ದ.ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಿಸಿರುವ ಹಿನ್ನಲೆಯಲ್ಲಿ ನಾಳೆ(ಜುಲೈ 12) ರಂದು ಜಿಲ್ಲೆಯ ಶಾಲೆ-ಅಂಗನವಾಡಿ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಇನ್ನು ಸ್ಥಳೀಯವಾಗಿ ಸಮಸ್ಯೆ ಇದ್ದಲ್ಲಿ ಕ್ರಮತೆಗೆದುಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *