DAKSHINA KANNADA
ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಅಗಸ್ಟ್ 3) ರಜೆ
ಮಂಗಳೂರು ಅಗಸ್ಚ್ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಮತ್ತು ಕಾಲೇಜುಗಳಿಗೆ ನಾಳೆ ಅಗಸ್ಟ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಹಲವಾರು ಕಡೆಗಳಲ್ಲಿ ಸಂಪರ್ಕ ಸೇತುವೆಗಳು ನಾಶವಾಗಿದೆ. ಅಲ್ಲದೆ ಮತ್ತೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ ಅಗಸ್ಟ್ 3 ರಂದು ರಜೆ ಘೋಷಿಸಲಾಗಿದೆ.
You must be logged in to post a comment Login