DAKSHINA KANNADA
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ಹರಿದ ನೀರು
ಸುಬ್ರಹ್ಮಣ್ಯ ಮೇ 31: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುರಿದ ಮಳೆಗೆ ರಸ್ತೆಯಲ್ಲೇ ನೀರು ಹರಿದು , ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಮುಂಗಾರು ಮಳೆ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ ಸುಬ್ರಹ್ಮಣ್ಯ, ಬಿಳಿನೆಲೆ, ಯೇನೆಕಲ್ಲು, ಬಳ್ಪ, ಪಂಜ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಗುತ್ತಿಗಾರು, ನಡುಗಲ್ಲು, ಎಲಿಮಲೆ, ಸಂಪಾಜೆ ಭಾಗದಲ್ಲೂ ಉತ್ತಮ ಮಳೆಯಾಗಿದೆ. ಸುಬ್ರಹ್ಮಣ್ಯ-ಗುತ್ತಿಗಾರು-ಸುಳ್ಯ ರಸ್ತೆ ಹಾಗೂ ಸುಬ್ರಹ್ಮಣ್ಯ-ಪಂಜ-ಬೆಳ್ಳಾರೆ ರಸ್ತೆಯ ಹಲವೆಡೆ ಅಸಮರ್ಪಕ ಚರಂಡಿಯಿಂದಾಗಿ ಮಳೆ ನೀರು ರಸ್ತೆಯಲ್ಲೇ ಹರಿದಿದ್ದರಿಂದ ವಾಹನ ಸವಾರರು ಸಮಸ್ಯೆ ಅನುಭವಿಸಿದರು. ಸುಬ್ರಹ್ಮಣ್ಯ, ಆದಿ ಸುಬ್ರಹ್ಮಣ್ಯದ ಬಳಿ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ. ನೀರು ತುಂಬಿದ್ದ ಇಲ್ಲಿನ ರಸ್ತೆಯಲ್ಲಿ ದೇವಳದ ಆನೆಯನ್ನು ನಡೆಸಿಕೊಂಡು ಹೋದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
You must be logged in to post a comment Login