ಮಂಗಳೂರು ಸೆಪ್ಟೆಂಬರ್ 18: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು , ಅಲ್ಲಲ್ಲಿ ಮಳೆಯಾಗಿದೆ. ಇದೀಗ ಉಡುಪಿ, ಉತ್ತರ ಕನ್ನಡ ಸೇರಿದಂತೆ 8 ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗುವ ಸಾಧ್ಯತೆಗಳಿದ್ದು, ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಮಂಗಳೂರಿನಲ್ಲಿ ಹಗಲು ಮೋಡದ ಜೊತೆ ಬಿಸಿಲಿನ ವಾತಾವರಣವಿದ್ದು ಸಂಜೆ ವೇಳೆ ಸಾಧಾರಣ ಮಳೆಯಾಗಿದೆ. ಇನ್ನು ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಶುಕ್ರವಾರ ಹಳದಿ ಅಲರ್ಟ್ ಘೋಷಿಸಲಾಗಿದೆ.



