Connect with us

    KARNATAKA

    ಬೆಂಗಳೂರು- ದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ

    ತೆಲಂಗಾಣ, ಜನವರಿ 04: ದೆಹಲಿ- ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟಶವಾತ್ ಯಾವುದೇ ಅನಾಹುತ ನಡೆದಿಲ್ಲ.

    ರವಿವಾರ ರಾತ್ರಿ ಈ ಘಟನೆ ನಡೆದಿದ್ದು, ತೆಲಂಗಾಣದ ವಿಕಾರಬಾದ್ ಜಿಲ್ಲೆಯಲ್ಲಿ ರೈಲು ಆಗಮಿಸುತ್ತಿದ್ದಾಗ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲೋಕೋಮೋಟಿವ್ ನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಲೋಕೊಪೈಲಟ್ ರೈಲನ್ನು ನಿಲ್ಲಿಸಿ ಮುಂಜಾಗೃತೆ ಕೈಗೊಂಡರು ಎಂದು ವರದಿಯಾಗಿದೆ.

    ಸಣ್ಣ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದು ಎಂಜಿನ್‌ ನ ಸ್ವಲ್ಪ ಪ್ರಮಾಣ ಆವರಿಸಿತ್ತು. ಕೂಡಲೇ ಬೋಗಿಗಳಿಂದ ಎಂಜಿನ್‌ ಅನ್ನು ಬೇರ್ಪಡಿಸಿದ್ದಾರೆ ಎಂದು ದಕ್ಷಿಣ ಕೇಂದ್ರ ರೈಲ್ವೆಯ ಅಧಿಕಾರಿ ಸಿ.ಎಚ್. ರಾಕೇಶ್ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply