Connect with us

    DAKSHINA KANNADA

    14 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರಾಜೇಶ್ ಕಾಸರಗೋಡಿನಲ್ಲಿ ಮಂಗಳೂರು ಪೊಲೀಸರಿಂದ ಅರೆಸ್ಟ್..!

    ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರದ ಬಂದರು ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

    ಮಂಗಳೂರು : ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರದ ಬಂದರು ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

    ನಗರದ ನ್ಯೂಚಿತ್ರ ಟಾಕೀಸಿನ ಬಳಿಯ ಸುಬ್ಬಯ್ಯಶೆಟ್ಟಿ ಕಂಪೌಂಡ್ ನ ರಾಜೇಶ್(52) ಬಂಧಿತ ಆರೋಪಿಯಾಗಿದ್ದಾನೆ.

    ಕೇರಳದ ಕಾಸರಗೋಡಿನಲ್ಲಿ ಬಂದರು ಠಾಣಾ ಎಎಸ್‌ಐ ಓಂ ದಾಸ್ ಮತ್ತು ಹೆಡ್ ಕಾನ್ಸ್‌ಟೇಬಲ್ ಮಚ್ಚೇಂದ್ರನಾಥ ಅವರು ಆರೋಪಿ ರಾಜೇಶ್‌ನನ್ನು ಬಂಧಿಸಿ ಮಂಗಳೂರಿಗೆ ಕರೆ ತಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply