Connect with us

    LATEST NEWS

    ರಾಜಕಾರಣದಿಂದ ಹಿಂದೆ ಸರಿದ ಸೂಪರ್ ಸ್ಟಾರ್….!!

    ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಈಗ ಶಾಕಿಂಗ್ ಸುದ್ದಿ ನೀಡಿದ್ದು, ತಮಿಳುನಾಡು ರಾಜಕಾರಣಕ್ಕೆ ಪ್ರವೇಶ ಮಾಡುವುದಿಲ್ಲ ಎಂದು ಹೇಳುವ ಮೂಲಕ ರಾಜಕೀಯ ದಿಂದ ಹಿಂದೆ ಸರಿದಿದ್ದಾರೆ.


    ತಮಿಳುನಾಡು ವಿಧಾನಸಭೆ ಚುನಾವಣೆ ಮುಂದಿನ ಏಪ್ರಿಲ್​-ಮೇ ತಿಂಗಳಲ್ಲಿ ನಡೆಯಲಿದ್ದು, ಜನವರಿಯಿಂದ ಡೂ ಆರ್ ಡೈ ರೀತಿಯಲ್ಲಿ ಚುನಾವಣಾ ರಾಜಕೀಯಕ್ಕೆ ಇಳಿಯುವುದಾಗಿ ಸೂಪರ್​ ಸ್ಟಾರ್ ರಜಿನಿಕಾಂತ್ ಘೋಷಿಸಿದ್ದರು. ಅಲ್ಲದೆ ಜನವರಿ ಪಕ್ಷದ ಚಿಹ್ನೆ ಸೇರಿದಂತೆ ಇತರ ಪ್ರಮುಖ ಘೋಷಣೆಗಳನ್ನು ಮಾಡುವುದಾಗಿ ತಿಳಿಸಿದ್ದಾರೆ.


    ಆದರೆ ಇದೀಗ ರಾಜಕೀಯದಿಂದ ಹಿಂದೆ ಸರಿದಿರುವ ಅವರು ಮೂರು ಪುಟಗಳ ವಿವರಣೆ ನೀಡಿರುವ ಅವರು ಅದನ್ನು ಟ್ವೀಟ್​ಗೆ ಅಪ್ಲೋಡ್ ಮಾಡಿ, ತಮಿಳುನಾಡು ಜನರ ಕ್ಷಮೆಯಾಚಿಸಿದ್ದಾರೆ. ರಾಜಕಾರಣದ ಹೊರತಾಗಿ ಜನಸೇವೆ ಮಾಡುವೆ. ಆರೋಗ್ಯ ಸ್ಥಿತಿ ಸರಿಯಾಗಿಲ್ಲದ ಕಾರಣ ಮತ್ತು ಕೋವಿಡ್ ಪರಿಸ್ಥಿತಿಯ ಕಾರಣ ಸದ್ಯ ಚುನಾವಣಾ ಕಣಕ್ಕೆ ಇಳಿದು ಕೆಲಸಮಾಡಲಾರೆ. ಹೀಗಾಗಿ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ರಜಿನಿಕಾಂತ್ ಘೋಷಿಸಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply