Connect with us

    FILM

    ಕಾಪಿರೈಟ್ ಆಕ್ಟ್ ಏನು ಹೇಳುತ್ತೆ ಎಂಬುದನ್ನು ಕೋರ್ಟ್‌ನಲ್ಲಿ ನೋಡೋಣ – ರಕ್ಷಿತ್ ಶೆಟ್ಟಿ

    ಬೆಂಗಳೂರು ಅಗಸ್ಟ್ 2; ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ ಅವರು ಯಶವಂತಪುರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಎನೆ ಆದರೂ ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ ಎಂದು ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.


    ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡು ಮತ್ತು ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಸಾಂಗ್ ಅನುಮತಿ ಇಲ್ಲದೆ ಬಳಸಿದಕ್ಕೆ ರಕ್ಷಿತ್ ಶೆಟ್ಟಿ ವಿರುದ್ಧ ಜುಲೈ 15ರಂದು ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದರು. ದೂರು ಬೆನ್ನಲ್ಲೇ ಇಂದು ವಿಚಾರಣೆಗೆ ಹಾಜರಾಗಿರುವ ರಕ್ಷಿತ್ ಶೆಟ್ಟಿಯವರು ಪೊಲೀಸರು ಕೇಳಿದ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.

    ರಕ್ಷಿತ್ ಶೆಟ್ಟಿ ಮಾತನಾಡಿ, ಕಾಪಿರೈಟ್ ಬಗ್ಗೆ ಇಂಡಸ್ಟ್ರಿಯಲ್ಲಿ ನಾಲೆಡ್ಜೇ ಇಲ್ಲ. ನನ್ನ ಪ್ರಕಾರ, ಕಾಪಿರೈಟ್ ಉಲ್ಲಂಘನೆ ಅಲ್ಲ. ಈ ಸಿನಿಮಾಗೂ ಮುನ್ನ ಆ ಹಾಡುಗಳನ್ನು ಬಳಸಲು ಅನುಮತಿಗಾಗಿ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಅವರ ಬಳಿ ಮಾತನಾಡಿದಾಗ, ಹೆಚ್ಚಿನ ಮೊತ್ತ ಕೇಳಿದ್ದರು. ಅಷ್ಟು ದೊಡ್ಡ ಅಮೌಂಟ್ ಕೊಡೋಕೆ ನಮಗೆ ಸರಿ ಎನಿಸಲಿಲ್ಲ. ಆಮೇಲೆ ಅವರು ಹೇಳ್ತೀವಿ ಅಂತ ಆ ಮಾತುಕತೆ ಅಲ್ಲೇ ನಿಂತು ಹೋಯಿತು. ಈ ಸಿನಿಮಾದ ರಿಲೀಸ್ ನಂತರ ಅವರು ಕೇಸ್ ಹಾಕಿದ್ದಾರೆ ಎಂದಿದ್ದಾರೆ.

    ಮೊದಲಿಗೆ ಇದು ಕಾಪಿರೈಟ್ ಉಲ್ಲಂಘನೆ ಅಲ್ಲ. ಕನ್ನಡದ ಹಾಡನ್ನು ಕನ್ನಡ ಚಿತ್ರದಲ್ಲಿ ಬಳಕೆ ಮಾಡುವಂತೆಯೇ ಇಲ್ವಾ ಎಂದು ನಟ ಪ್ರಶ್ನಿಸಿದ್ದಾರೆ. ಕೊಟ್ಟಿರುವ ಕಂಪ್ಲೆಂಟ್‌ಗೆ ನಾನು ಕೂಡ ಕೋರ್ಟ್‌ನಲ್ಲಿ ಫೈಟ್ ಮಾಡ್ತೀನಿ ಎಂದಿದ್ದಾರೆ. ಸಾಂಧರ್ಬಿಕವಾಗಿ ಹಾಡು ಬಳಕೆಯಾಗಿದೆ ಅಷ್ಟೆ. ಕಾಪಿರೈಟ್ ಆಕ್ಟ್ ಏನು ಹೇಳುತ್ತೆ ಎಂಬುದನ್ನು ಕೋರ್ಟ್‌ನಲ್ಲಿ ನೋಡೋಣ. ನ್ಯಾಯಾಲಯ ತೀರ್ಮಾನ ಮಾಡಲಿ. ಈ ಬಗ್ಗೆ ನಮಗೂ ಅರ್ಥವಾಗಲಿ ಯಾವುದೂ ಬಳಸಬೇಕು ಯಾವುದು ಬಳಸಬಾರದು ಅಂತ. ನಮ್ಮ ಪ್ರಕಾರ, ಇದು ಸರಿ ಅಂತಾ ವಾದ ಮಾಡ್ತೀನಿ ಎಂದು ರಕ್ಷಿತ್ ಶೆಟ್ಟಿ ಮಾತನಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply