Connect with us

    LATEST NEWS

    ಮಂಗಳೂರಿನಲ್ಲಿ ರಾಮಲಲ್ಲಾ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್ ಗೆ ವಿಶ್ವಕರ್ಮ ಕುಲ ತಿಲಕ ಬಿರುದು

    ಮಂಗಳೂರು ಎಪ್ರಿಲ್ 14 : ಅಯೋಧ್ಯೆಯ ಶ್ರೀರಾಮಲಲ್ಲಾ ಮೂರ್ತಿ ನಿರ್ಮಿಸಿದ್ದ ಮೈಸೂರಿನ ಅರುಣ್ ಯೋಗಿರಾಜ್ ಅವರಿಗೆ ಮಂಗಳೂರಿನಲ್ಲಿ ವಿಶ್ವಕರ್ಮ ಕುಲ ತಿಲಕ’ ಬಿರುದು ನೀಡಿ ಸನ್ಮಾನಿಸಲಾಯಿತು.


    ರಥಬೀದಿಯ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಶ್ರಯದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ವತಿಯಿಂದ ಶನಿವಾರ ಆಯೋಜಿಸಿದ್ದ ‘ಸಮರ್ಪಣಂ ಕಲೋತ್ಸವ’ ಕಾರ್ಯಕ್ರಮಕ್ಕೆ ಅರುಣ್ ಅವರನ್ನು ಮೆರವಣಿಗೆಯಲ್ಲಿ ಕರೆತಂದು ‘ವಿಶ್ವಕರ್ಮ ಕುಲ ತಿಲಕ’ ಬಿರುದು ನೀಡಿ ಸನ್ಮಾನಿಸಲಾಯಿತು.

    ಶ್ರೀರಾಮ ಮೂರ್ತಿ ನಿರ್ಮಾಣಕ್ಕಾಗಿಯೇ ನಾನು ಹುಟ್ಟಿರುವುದೇನೋ ಅನ್ನಿಸುತ್ತಿದೆ. ವಿಶ್ವಕರ್ಮ ಸಮುದಾಯದಲ್ಲಿ ಹುಟ್ಟಿದ್ದು ನನ್ನ ಪುಣ್ಯ. ಕೋಟ್ಯಂತರ ಜನರ ಆಶೀರ್ವಾದದಿಂದ ಧನ್ಯನಾಗಿದ್ದೇನೆ. ಯುವ ತಲೆಮಾರು ಈ ಕಲೆಯನ್ನು ಕಲಿತು, ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗೆ ಇದನ್ನು ಕಲಿಸುವ ಉದ್ದೇಶವಿದೆ’ ಎಂದು ಅರುಣ್ ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply