Connect with us

BANTWAL

ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಕೂಲಿ ಕೊಡಿ- ರಮಾನಾಥ ರೈ

ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಕೂಲಿ ಕೊಡಿ- ರಮಾನಾಥ ರೈ

ಮಂಗಳೂರು ಏಪ್ರಿಲ್ 19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ರಮಾನಾಥ ರೈ ಇಂದು ನಾಮ ಪತ್ರ ಸಲ್ಲಿಸಿದ್ದಾರೆ. ಇದು ರಮಾನಾಥ ರೈ ಅವರ 8 ನೇ ಬಾರಿಯ ನಾಮಪತ್ರ ಸಲ್ಲಿಕೆಯಾಗಿದೆ.

ರಮಾನಾಥ್ ರೈ ನಾಮಪತ್ರ ಸಲ್ಲಿಕೆಗೂ ಮೊದಲು ಬಂಟ್ವಾಳದಲ್ಲಿ ಸಮಾವೇಶ ನಡೆಸಿದರು. ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿದ ಸಮಾವೇಶ ವನ್ನು ಉದ್ದೇಶಿಸಿ ಮಾತನಾಡಿದ ರಮಾನಾಥ್ ರೈ ದಿ. ದೇವರಾಜ ಅರಸು ಅವರ ಬಳಿಕ ಸಾಮಾಜಿಕ ನ್ಯಾಯಕ್ಕಾಗಿ ಪೂರಕ ಕೆಲಸ ಮಾಡಿರುವವರು ಸಿಎಂ ಸಿದ್ಧರಾಮಯ್ಯನವರು ಎಂದು ಹೇಳಿದ ರೈ ಸಿದ್ದರಾಮಯ್ಯ ಅವರನ್ನು ದೇವರಾಜ್ ಅರಸು ಅವರಿಗೆ ಹೋಲಿಸಿದರು.

ಜನಾರ್ದನ ಪೂಜಾರಿಯವರ ಎಲ್ಲಾ ಚುನಾವಣೆಯಲ್ಲೂ ನಿಷ್ಠಾವಂತ ಕಾರ್ಯಕರ್ತನಾಗಿ ನಾನು ದುಡಿದಿದ್ದೇನೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಯಾರು ನಿಲ್ಲುತ್ತಾರೆ ಅವರಿಗೆ ದ್ರೋಹ ಮಾಡುವ ಕೆಲಸ ನಾನು ಮಾಡಿಲ್ಲ. ಸಣ್ಣಪುಟ್ಟ ನೋವಿದ್ದಲ್ಲಿ ಮರೆತು ಪಕ್ಷವನ್ನು‌ ಗೆಲ್ಲಿಸುವ ಕೆಲಸ ಮಾಡಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆನೀಡಿದರು.

ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಕೂಲಿ ಕೊಡಿ ಎನ್ನುವ ರೀತಿಯಲ್ಲಿ ಚುನಾವಣೆಗೆ ಹೊರಟಿದ್ದೇನೆ. ಬಂಟ್ವಾಳ ಕ್ಷೇತ್ರದಲ್ಲಿ ನಾನು 6 ಬಾರಿ ಗೆದ್ದಿದ್ದು, ಒಮ್ಮೆ ಮಾತ್ರ ಸೋತಿದ್ದೇನೆ . ಈಗ ನನ್ನನ್ನು ಮತ್ತೆ ಗೆಲ್ಲಿಸುವ ಜವಾಬ್ದಾರಿ ಜನರ‌ ಮೇಲಿದೆ ಎಂದು ಹೇಳಿದರು. ನಾನು ಗೆದ್ದಲ್ಲಿ ಈ ಹಿಂದೆ ಮಾಡಿದ ಕೆಲಸಕ್ಕಿಂತ ದುಪ್ಪಟ್ಟು ಕೆಲಸ ಮಾಡಿ ತೋರಿಸುತ್ತೇನೆ ಎಂದು ಅವರು ಭರವಸೆ ನೀಡಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *