Connect with us

    KARNATAKA

    ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ,ಇಬ್ಬರು ಆರೋಪಿಗಳ ಫೊಟೊ ಬಿಡುಗಡೆ ಮಾಡಿದ NIA..

    ಬೆಂಗಳೂರು : ನಾಡನ್ನು ತಲ್ಲಣಗೊಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಫೊಟೊಗಳನ್ನು ಎನ್‌ಐಎ(NIA) ಬಿಡುಗಡೆ ಮಾಡಿದೆ.

    ಬಾಂಬ್ ಬ್ಲಾಸ್ಟ್  ಪ್ರಕರಣದಲ್ಲಿ ಓರ್ವ ಆರೋಪಿ ಮುಝಮ್ಮಲ್​ ಶರೀಫ್ ‌ನನ್ನು ಮಾರ್ಚ್ 28 ರಂದು ಎನ್​ಐಎ ಅಧಿಕಾರಿಗಳು  ಬಂಧಿಸಿದ್ದಾರೆ.  ಇದರ  ಬೆನ್ನಲ್ಲೇ ಮತ್ತಿಬ್ಬರು ಆರೋಪಿಗಳ ಪೊಟೊಗಳನ್ನು ಎನ್‌ಐಎ ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್​ಐಎ ಘೋಷಣೆ ಮಾಡಿದೆ. ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು ಈ ಆರೋಪಿಗಳ ಶೋಧ ಕಾರ್ಯ ಎನ್‌ಐಎ ಮುಂದುವರೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply