Connect with us

    FILM

    ರಾಜ್ ಬಿ ಶೆಟ್ಟಿ ಜೊತೆ ರಮ್ಯಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’…!!

    ಬೆಂಗಳೂರು ಅಕ್ಟೋಬರ್ 05: ಕೊನೆಗೂ ಹಲವು ವರ್ಷಗಳ ಬಳಿಕ ಮೋಹಕ ತಾರೆ ರಮ್ಯಾ ಚಿತ್ರರಂಗಕ್ಕೆ ರಿ ಎಂಟ್ರಿ ಮಾಡಿದ್ದು, ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಹೊಸ ಚಿತ್ರ ಘೋಷಿಸಿದ್ದಾರೆ.


    ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಈ ಚಿತ್ರದ ಹೆಸರು. ಈ ಚಿತ್ರವನ್ನು ಲೈಟರ್‌ ಬುದ್ಧ ಫಿಲ್ಮ್ಸ್‌ ಸಹಯೋಗದಲ್ಲಿ ನಿರ್ಮಿಸಲಾಗುತ್ತಿದೆ. ಚಿತ್ರದಲ್ಲಿ ರಾಜ್‌ ಬಿ. ಶೆಟ್ಟಿ ಹಾಗೂ ರಮ್ಯಾ ಪ್ರಧಾನ ಪಾತ್ರದಲ್ಲಿದ್ದಾರೆ. ಕಥೆ, ನಿರ್ದೇಶನ ರಾಜ್‌ ಬಿ. ಶೆಟ್ಟಿ ಅವರದ್ದು. ರಾಜ್‌ ಅವರು ಕಥೆ ಹೇಳಿದ್ದು ರಮ್ಯಾ ಅವರಿಗೆ ಇಷ್ಟವಾಗಿ ಈ ಚಿತ್ರ ನಿರ್ಮಿಸಲು ಮುಂದಾದರಂತೆ.

     

    ರಾಜ್‌ ಅವರ ಗರುಡ ಗಮನ ವೃಷಭ ವಾಹನ ಚಿತ್ರದ ತಾಂತ್ರಿಕ ತಂಡವೇ ಇಲ್ಲಿ ಕೆಲಸ ಮಾಡಲಿದೆ. ಮಿಧುನ್‌ ಮುಕುಂದನ್‌ ಅವರ ಸಂಗೀತ, ಪ್ರವೀಣ್‌ ಶ್ರೀಯಾನ್‌ ಅವರ ಸಂಗೀತವಿದೆ.

    Share Information
    Advertisement
    Click to comment

    You must be logged in to post a comment Login

    Leave a Reply