ಉಡುಪಿ ಮಾರ್ಚ್ 16: ಕಟಪಾಡಿ ಬಳಿ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದುಸ್ತಾನ್ ಪೆಟ್ರೋಲಿಯಂ ಕಂಪೆನಿಗೆ ಸೇರಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆಗೆ ಬಿದ್ದಿದೆ. ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುರಕ್ಷತೆಗಾಗಿ ಸಂಚಾರವನ್ನು ಬದಲಾವಣೆ ಮಾಡಲಾಗಿದೆ.

ಬದಲಿ ಮಾರ್ಗದ ವಿವರಗಳು:
1. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ವಾಹನಗಳು -ಕಾಪುವಿನಿಂದ ಶಿರ್ವಾ-ಮೂಡಬೆಳ್ಳೆ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗುವುದು ಅಥವಾ ಪಡುಬಿದ್ರೆ ಬೆಳ್ಳಣ್- ಶಿರ್ವ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತಲುಪುವುದು
2. ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು – ಮಣಿಪಾಲದಿಂದ ಮಣಿಪುರ-ಮೂಡಬೆಳ್ಳೆ ಮಾರ್ಗವಾಗಿ ಶಿರ್ವ ಮಾರ್ಗವಾಗಿ ಕಾಪು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳುವುದು ಅಥವಾ ಮಣಿಪಾಲದಿಂದ ಶಿರ್ವ-ಬೆಳ್ಳಣ್ ಮಾರ್ಗವಾಗಿ ಪಡುಬಿದ್ರೆ ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ಸಂಚರಿಸುವುದು.
ಗಮನಿಸಿ: ಈ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತದೆ ಹಾಗೂ ರಾತ್ರಿ ಎಂಟು ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.