Connect with us

    BELTHANGADI

    ಧರ್ಮಸ್ಧಳದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ರೇವಣ್ಣ

    ಧರ್ಮಸ್ಧಳದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ರೇವಣ್ಣ

    ಮಂಗಳೂರು ಜೂನ್ 19: ಧರ್ಮಸ್ಥಳದ ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಭೇಟಿ ಮಾಡಿದ್ದಾರೆ.

    ಮಳೆಹಾನಿ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಸುವ ಸಲುವಾಗಿ ರೇವಣ್ಣ ಮಂಗಳೂರಿಗೆ ಆಗಮಿಸಿದ್ದಾರೆ. ಇದೇ ವೇಳೆ, ಹಾಸನದಿಂದ ಬರುವಾಗ ಇತ್ತೀಚೆಗೆ ಗುಡ್ಡಕುಸಿದ ಸಂಚಾರಕ್ಕೆ ಬಂದ್ ಆಗಿದ್ದ ಚಾರ್ಮಾಡಿ ಹೆದ್ದಾರಿ ವೀಕ್ಷಣೆಗೆ ರೇವಣ್ಣ ತೆರಳಿದ್ದರು.

    ಚಾರ್ಮಾಡಿ ಹೆದ್ದಾರಿ ವಿಕ್ಷಣೆ ಬಳಿಕ ಬಳಿಕ ಉಜಿರೆಗೆ ಆಗಮಿಸಿದ ರೇವಣ್ಣ ಉಜಿರೆಯ ಎಸ್ ಡಿಎಂ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

    ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಚಿವ ಸ್ಥಾನ ವಿಚಾರದಲ್ಲಿ ಅಸಮಾಧಾನ ಸೃಷ್ಟಿಯಾಗಿತ್ತು. ಆ ಬಳಿಕ ದೂರವೇ ಉಳಿದಿದ್ದ ಸಿದ್ದರಾಮಯ್ಯ ಅವರನ್ನು ಇದೀಗ ಸಚಿವ ರೇವಣ್ಣ ಭೇಟಿ ಮಾಡಿ, ಕೆಲಹೊತ್ತು ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಅಪರೂಪದ ಬೆಳವಣಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply