LATEST NEWS
ಕಾರ್ಕಳಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ…!!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಕಾರ್ಕಳ ಮಾರ್ಚ್ 29: ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣು ಮೂರ್ತಿ ದೇವಾಲಯಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ರವಿಶಾಸ್ತ್ರಿ ಮಂಗಳವಾರ ಭೇಟಿ ನೀಡಿದರು.
ಅವರ ಸಂಬಂಧಿಗಳಾದ ಸಂತೋಷ್ ಶಾಸ್ತ್ರಿ , ಕವಿತಾ ಶಾಸ್ತ್ರೀ ಹಾಗೂ ಕುಟುಂಬದವರು ಮೂಲ ನಾಗದೇವರಿಗೆ ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ , ಕಲ್ಪೋಕ್ತ ಪೂಜೆ , ನಾಗತಂಬಿಲ ಸೇವೆ ಅರ್ಪಿಸಿದರು ಬಳಿಕ ವಿಷ್ಣು ಮೂರ್ತಿ ದೇವರಿಗೆ ಮಹಾಪೂಜೆ ಸಲ್ಲಿಸಲಾಯಿತು. ನರಸಿಂಹ ತಂತ್ರಿ ಹಾಗೂ ಅಶೋಕ್ ಕಾರಂತ್ ಪೂಜಾ ವಿಧಿ ವಿಧಾನ ನೆರವೇರಿಸಿದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login