Connect with us

DAKSHINA KANNADA

ಆರ್ ಸಿಬಿ ವಿಜಯೋತ್ಸವದ ಕಾಲ್ತುಳಿತದಲ್ಲಿ ಗಂಡನ ಎದುರೇ ಪ್ರಾಣಬಿಟ್ಟ ಮುಲ್ಕಿ ಮೂಲದ ಅಕ್ಷತಾ

ಬೆಂಗಳೂರು ಜೂನ್ 05: ಬೆಂಗಳೂರಿನಲ್ಲಿ ನಿನ್ನೆ ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ಮುಲ್ಕಿ ಮೂಲದ ಮಹಿಳೆ ತನ್ನ ಗಂಡನ ಎದುರೇ ಜೀವ ಬಿಟ್ಟ ಧಾರುಣ ಘಟನೆ ನಡೆದಿದೆ.


ಮೂಲತಃ ಅಕ್ಷತಾ ಮಂಗಳೂರಿನ ಮೂಲ್ಕಿಯವರಾಗಿದ್ದು ಸಿಎ ಪರೀಕ್ಷೆಯಲ್ಲಿ ಚಿನ್ನದ ಪದಕ ವಿಜೇತೆಯಾಗಿದ್ದರು. ಒಂದೂವರೆ ವರ್ಷದ ಹಿಂದೆ ಎಂಜಿನಿಯರ್ ಆಗಿರುವ ಸಿದ್ದಾಪುರ ನಗರದ ಆಶಯ್ ಅವರೊಂದಿಗೆ ವಿವಾಹವಾಗಿದ್ದರು. ಗಂಡ ಹೆಂಡತಿ ಇಬ್ಬರೂ ಆರ್‌ಸಿಬಿ (RCB) ಅಭಿಮಾನಿಗಳಾಗಿದ್ದರು. ಹೀಗಾಗಿ ಬುಧವಾರ ಮಧ್ಯಾಹ್ನ ಕಚೇರಿಗೆ ರಜೆ ಹಾಕಿ, ಇಬ್ಬರೂ ಆರ್‌ಸಿಬಿ ಟೀಶರ್ಟ್ ಧರಿಸಿ ರೋಡ್ ಶೋಗೆ ಭಾಗವಹಿಸಲು ತೆರಳಿದ್ದರು. ರೋಡ್ ಶೋ ಕ್ಯಾನ್ಸಲ್ ಆಗಿದ್ದರಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಇಬ್ಬರೂ ತೆರಳಿದ್ದರು.


ಕ್ರೀಡಾಂಗಣದ ಗೇಟ್ ನಂಬರ್ 17ರಿಂದ ದಂಪತಿ ಒಳಗೆ ಹೋಗುತ್ತಿದ್ದರು. ಈ ಕಾಲ್ತುಳಿತ ಉಂಟಾದಾಗ ಅಕ್ಷತಾ, ಆಶಯ್‌ನಿಂದ ಬೇರ್ಪಟ್ಟಿದ್ದರು. ಈ ವೇಳೆ ಇಬ್ಬರೂ ಕಾಲ್ತುಳಿತಕ್ಕೊಳಗಾದರೂ ಓರ್ವ ಮಹಿಳೆ, ಆಶಯ್‌ರನ್ನು ರಕ್ಷಣೆ ಮಾಡಿದ್ದರು. ಆದರೆ ಅಕ್ಷತಾ ಜನರ ಕಾಲಡಿ ಸಿಕ್ಕಿ ಅಲ್ಲಿಯೇ ಮೃತಪಟ್ಟಿದ್ದರು. ಇನ್ನು ಅಕ್ಷತಾ ಆರ್‌ಸಿಬಿ ಟೀಶರ್ಟ್ (RCB T-Shirt) ಧರಿಸಿದ್ದರಿಂದ ಆಶಯ್ ಪತ್ನಿಯ ಗುರುತುಹಿಡಿದರು. ಆ ವೇಳೆಗಾಗಲೇ ಅಕ್ಷತಾ ಮೃತಪಟ್ಟಿದ್ದರು. ಇದೀಗ ಅಕ್ಷತಾ ಅವರ ಮೃತದೇಹವನ್ನು ಪತಿಯ ಮನೆಗೆ ತರಲಾಗಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *