Connect with us

KARNATAKA

ರೀಲ್ಸ್ ಸ್ಟೇಟಸ್ ಹಾಕಿದ್ದಕ್ಕೆ ಪ್ರೇಮಿಗಳ ನಡುವೆ ಗಲಾಟೆ – ಯುವತಿ ಆತ್ಮಹತ್ಯೆಗೆ ಶರಣು

ತುಮಕೂರು ಜೂನ್ 24: ರೀಲ್ಸ್ ಒಂದನ್ನು ಸ್ಟೇಟಸ್ ಗೆ ಅಪ್ಲೋಡ್ ಮಾಡಿದ್ದಕ್ಕೆ ಪ್ರೇಮಿಗಳ ನಡುವೆ ನಡೆದ ಜಗಳಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.
ಮೃತರನ್ನು ಚೈತನ್ಯ (22) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ 10 ಘಂಟೆ ಸುಮಾರಿಗೆ ಘಟನೆ ನಡೆದಿದೆ. ತುಮಕೂರು ಗ್ರಾಮಾಂತರದ ಹೊಸಹಳ್ಳಿಯಲ್ಲಿ ತಾಯಿ ಜೊತೆ ವಾಸವಿದ್ದ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತಿದ್ದಳು. ಈಕೆ ಕಾರು ಚಾಲಕನಾಗಿದ್ದ ಪಕ್ಕದ ಊರಿನ ವಿಜಯ್ ಎಂಬಾತನನ್ನು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದಳು ಎಂದು ಹೇಳಲಾಗಿದೆ.


ಈ ನಡುವೆ ಸೋಮವಾರ ಚೈತನ್ಯ ರೀಲ್ಸ್‌ವೊಂದನ್ನು ಸ್ಟೇಟಸ್‌ನಲ್ಲಿ ಅಪ್ಲೋಡ್ ಮಾಡಿದ್ದಳು. ಇದೇ ವಿಚಾರವಾಗಿ ಪ್ರಶ್ನಿಸಲು ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದ. ಆಗ ಚೈತನ್ಯ ತಾಯಿ ಸೌಭಾಗ್ಯಮ್ಮ ರೂಂನಲ್ಲಿ ಇದ್ದರು. ತಾಯಿ ಇದ್ದ ರೂಂ ಬಾಗಿಲಿನ ಚಿಲಕ ಹಾಕಿ ಕಿಟಕಿ ಬಳಿ ಇಬ್ಬರು ಜಗಳವಾಡಿದ್ದಾರೆ. ಆ ಬಳಿಕ ಚೈತನ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ವಿಚಾರವನ್ನು ವಿಜಯ್ ಚೈತನ್ಯ ಸಂಬಂಧಿಗೆ ಕರೆ ಮಾಡಿ ತಿಳಿಸಿದ್ದಾನೆ. ಸಂಬಂಧಿ ಬಂದು ನೋಡಿದಾಗ ಚೈತನ್ಯ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

 

ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ ಕಾರಣ ಎಂದು ದೂರು ದಾಖಲಾಗಿದ್ದು, ಪ್ರಿಯಕರ ವಿಜಯ್‌ನನ್ನು ತುಮಕೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ

Share Information
Continue Reading
Advertisement
2 Comments

2 Comments

    Leave a Reply

    Your email address will not be published. Required fields are marked *