Connect with us

    LATEST NEWS

    ಚಿಕಿತ್ಸೆಗೆ ರೋಗಿಗಳಿಂದ ಪಡೆದ ಹೆಚ್ಚುವರಿ ಹಣ ವಾಪಾಸ್ ಮಾಡಿ – ಖಾಸಗಿ ಆಸ್ಪತ್ರೆಗಳಿಗೆ ದ.ಕ ಜಿಲ್ಲಾಧಿಕಾರಿ ಆದೇಶ

    ಮಂಗಳೂರು: ರೋಗಿಗಳಿಂದ ಚಿಕಿತ್ಸೆಗೆ ಹೆಚ್ಚಿನ ಹಣ ಪಡೆದ 7 ಆಸ್ಪತ್ರೆಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದು, ಕೂಡಲೇ ಪಡೆದ ಹೆಚ್ಚುವರಿ ಹಣವನ್ನು ವಾಪಾಸ್ ನೀಡಬೇಕೆಂದು ಆದೇಶಿಸಿದ್ದಾರೆ.


    ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು ರೋಗಿಗಳು ಹಾಗೂ ಅವರ ಸಂಬಂಧಿಕರಿಂದ ಹೆಚ್ಚುವರಿ ಹಣ ಪಡೆದಿರುವ ಬಗ್ಗೆ ಹಾಗೂ ಯೋಜನೆಯಡಿ ಚಿಕಿತ್ಸೆಗೆ ನಿರ್ಲಕ್ಷ್ಯ ವಹಿಸಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಸಂತ್ರಸ್ತರಿಗೆ ಕೂಡಲೇ ಹಣ ಹಿಂದಿರುಗಿಸಲು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಂದುಕೊರತೆ ಪರಿಹಾರ ಸಮಿತಿ ಸಭೆಯಲ್ಲಿ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸಂತ್ರಸ್ತರು ದಾಖಲಿಸಿದ್ದ ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿ, ವಾರದೊಳಗೆ ರೋಗಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿ, ಸ್ವೀಕೃತಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಆದೇಶಿಸಿದರು.

    ಈ ಕುರಿತು ಕುಂದುಕೊರತೆ ಪರಿಹಾರ ಸಮಿತಿ ಸದಸ್ಯ ಕಾರ್ಯದರ್ಶಿಯೂ ಆಗಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್‌ಕುಮಾರ್ ಅವರು, ಏಳು ಆಸ್ಪತ್ರೆಗಳಿಗೆ ನೋಟಿಸ್‌ ಜಾರಿಗೊಳಿಸಿದ್ದು, ರೋಗಿಗಳಿಂದ ಹೆಚ್ಚುವರಿಯಾಗಿ ಪಡೆದಿರುವ ಒಟ್ಟು ₹3.69 ಲಕ್ಷ ಕೂಡಲೇ ಹಿಂದಿರುಗಿಸುವಂತೆ ಸೂಚಿಸಿದ್ದಾರೆ. ಒಂದು ಖಾಸಗಿ ಆಸ್ಪತ್ರೆಯಲ್ಲಿ ಆಯುಷ್ಮಾನ್‌ ಭಾರತ–ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ನೀಡಲು ನಿರಾಕರಿಸಿದ್ದು, ಅದಕ್ಕಾಗಿ ₹1.50 ಲಕ್ಷ ಮರುಪಾವತಿಸುವಂತೆ ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಆದೇಶಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply