Connect with us

    KARNATAKA

    ರೇಣುಕಾಸ್ವಾಮಿ ಮರ್ಡರ್ ಕೇಸ್ ಮರಣೋತ್ತರ ವರದಿ ಬಹಿರಂಗ, ಚಿತ್ರಹಿಂಸೆ ಮತ್ತು ರಕ್ತಸ್ರಾವದಿಂದ ಸಾವು..!

    ಬೆಂಗಳೂರು:  ರೇಣುಕಾಸ್ವಾಮಿ ಮರ್ಡರ್ ಕೇಸ್‌ನ ಮರಣೋತ್ತರ ವರದಿ ಇದೀಗ ಬಹಿರಂಗಗೊಂಡಿದ್ದು , ತೀವ್ರ ರಕ್ತಸ್ರಾವ ಮತ್ತು ಚಿತ್ರಹಿಂಸೆಯಿಂದ ರೇಣುಕಾಸ್ವಾಮಿ ಸಾವಾಗಿದೆ ಎಂದು ಹೇಳಲಾಗಿದೆ.

    ನಟ ದರ್ಶನ್ ಅವರು ಚಿತ್ರಹಿಂಸೆ ನೀಡಿ ಹತ್ಯೆಗೈದಿದ್ದಾರೆ ಎನ್ನಲಾದ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಅವರ ಮರಣೋತ್ತರ ಪರೀಕ್ಷೆಯ ವರದಿ  ಬಹಿರಂಗಗೊಂಡಿದ್ದು, ರೇಣುಕಾಸ್ವಾಮಿ ಚಿತ್ರಹಿಂಸೆ ಮತ್ತು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಶವಪರೀಕ್ಷೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.  ರೇಣುಕಾಸ್ವಾಮಿ ಅವರ ತಲೆಯನ್ನು ಶೆಡ್ಡಿನಲ್ಲಿ ನಿಂತಿದ್ದ ಮಿನಿ ಟ್ರಕ್‌ಗೆ ಹೊಡೆಯಲಾಗಿದೆ ಎಂದು ಶವಪರೀಕ್ಷೆ ವರದಿ ಹೇಳಲಾಗಿದ್ದು, ಈ ವಾಹನವನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ನೀಡಲು ಬಳಸಿದ ಮರದ ಕೋಲುಗಳು, ಚರ್ಮದ ಬೆಲ್ಟ್ ಮತ್ತು ಹಗ್ಗವನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಶವಪರೀಕ್ಷೆಯಲ್ಲಿ ರೇಣುಕಾ ಸ್ವಾಮಿ ದೇಹದ ಮೇಲೆ 15 ಗಾಯಗಳು ಕಂಡುಬಂದಿವೆ. ರೇಣುಕಾ ಸ್ವಾಮಿ ಅವರ ದೇಹದ ತಲೆ, ಹೊಟ್ಟೆ, ಎದೆ ಮತ್ತು ಇತರ ಭಾಗಗಳಲ್ಲಿ ಗಾಯದ ಗುರುತುಗಳಿವೆ.
    ರೇಣುಕಾಸ್ವಾಮಿ ಮೈ ಮೇಲೆ ಇರುವ ಗಾಯದ ಗುರುತುಗಳು ಮರದ ಕೋಲು, ಚರ್ಮದ ಬೆಲ್ಟ್ ಹಾಗೂ ಹಗ್ಗದಿಂದ ಹೊಡೆದ ಗುರುತುಗಳಾಗಿವೆ ಎಂದು ವರದಿಯಲ್ಲಿ ಹೇಳಲಾಗಿದೆ.
    ಇನ್ನು ಕೊಲೆ ಬಳಿಕ ತಾವೇ ಕೊಲೆ ಮಾಡಿದ್ದು ಎಂದು ಆರೋಪ ಹೊತ್ತುಕೊಳ್ಳಲು ಮೂವರು ಆರೋಪಿಗಳಿಗೆ ನಟ ದರ್ಶನ್ ತಲಾ 5 ಲಕ್ಷ ರೂ ನೀಡಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆ ವೇಳೆ ಈ ಮಾಹಿತಿಯನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply