Connect with us

    KARNATAKA

    ‘ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ,ಶೀಘ್ರವೇ ಚಾರ್ಜ್​ಶೀಟ್​​​​ ಸಲ್ಲಿಕೆ’ ಪೊಲೀಸ್ ಕಮಿಷನರ್ ಬಿ.ದಯಾನಂದ್

    ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಕೇಸ್​​ಗೆ​​ ಸಂಬಂಧಿಸಿ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರವೇ ಚಾರ್ಜ್​ಶೀಟ್​​​​ ಸಲ್ಲಿಕೆಗೆ ಸಿದ್ಧತೆ ನಡೆದಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರು ಮಾಹಿತಿ ನೀಡಿದ್ದಾರೆ.

    ಈ ಕೊಲೆ ಪ್ರಕರಣ ಸಂಬಂಧ ಬಹುತೇಕ ಎಫ್​​​ಎಸ್​​​ಎಲ್​​​ ವರದಿಗಳು ಪೊಲೀಸರ ಕೈಗೆ ಸೇರಿದ್ದು, ಅನೇಕ ಮೌಖಿಕ, ಸಾಂದರ್ಭಿಕ ಹಾಗೂ ತಾಂತ್ರಿಕ ಸಾಕ್ಷಿಗಳನ್ನು ಈಗಾಗಲೇ ಸಂಗ್ರಹಿಸಲಾಗಿದೆ. ಶೇಕಡ 70 ರಷ್ಟು ವರದಿಗಳು ತಮ್ಮ ಕೈ ಸೇರಿವೆ. ಗ್ಯಾಜೆಟ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಸಾಕ್ಷ್ಯಗಳನ್ನು ಹೈದರಾಬಾದ್ ಎಫ್​ಎಸ್​ಎಲ್ ಗೆ ಕಳಿಸಲಾಗಿದ್ದು ಅಲ್ಲಿಂದ ವರದಿಗಳು ಕೆಲ ದಿನಗಳಲ್ಲಿ ತಮ್ಮನ್ನು ತಲುಪಲಿವೆ. ಎಲ್ಲ ವರದಿಗಳು ಪ್ರಾಪ್ತವಾದ ಬಳಿಕ ಮತ್ತೊಮ್ಮೆ ಸಾಕ್ಷಿಗಳಿಂದ ಸ್ಪಷ್ಟೀಕರಣ ಪಡೆಯಲಾಗುವುದು, ಅದಾದ ನಂತರ ಪ್ರಕರಣದ ಅಂತಿಮ ವರದಿ ಅಥವಾ ಚಾರ್ಜ್​ಶೀಟನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು.

    ಕೊಲೆ ಆರೋಪದಲ್ಲಿ ಸದ್ಯ ನಟ ದರ್ಶನ್​ & ಗ್ಯಾಂಗ್​ನ ಒಟ್ಟು 17 ಆರೋಪಿಗಳು ಜೈಲು ಸೇರಿದ್ದಾರೆ. ದರ್ಶನ್​​ ಆಪ್ತೆ ಪವಿತ್ರಾಗೌಡ ಪ್ರಕರಣದಲ್ಲಿ A1 ಆರೋಪಿಯಾಗಿದ್ದು, ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ, ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಸಂಚು ರೂಪಿಸಿ ಅಪಹರಣ ಮಾಡಿ, ಬೆಂಗಳೂರಿನ ಪಟ್ಟಣಗೆರೆ ಶೆಡ್​​ಗೆ ಕರೆತಂದು ಹಲ್ಲೆ ನಡೆಸಿ ಕೊಲೆಗೈಯಲಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply