LATEST NEWS
ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆ ಕೋರಿದ ಪ್ರಮೋದ್ ಮಧ್ವರಾಜ್
ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆ ಕೋರಿದ ಪ್ರಮೋದ್ ಮಧ್ವರಾಜ್
ಉಡುಪಿ ಎಪ್ರಿಲ್ 4:ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಭದ್ರತೆಗೆ ಗೃಹ ಇಲಾಖೆಗೆ ಮನವಿ ಮಾಡಿದ್ದಾರೆ.
ಚುನಾವಣೆ ಹಿನ್ನಲೆಯಲ್ಲಿ ಯಾವುದೇ ರೀತಿಯ ಅವಘಡ ಸಂಭವಿಸಬಾರದು ಎಂಬ ಮುನ್ನೆಚ್ಚರಿಕೆಯಿಂದ ಈ ಮನವಿ ಮಾಡಿದ್ದೇನೆ ಎಂದು ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಮೊದಲ ಬಾರಿಗೆ ಗೃಹ ಇಲಾಖೆಗೆ ಭದ್ರತೆ ನೀಡಿ ಎಂದು ಪತ್ರ ಬರೆದಿದ್ದು, ಗೃಹಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದರು. ಭದ್ರತೆಗೆ ಯಾವುದೇ ಕಾರಣ ಕೊಟ್ಟಿಲ್ಲ, ಬರಿ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆ ಕೇಳಿದ್ದೇನೆ ಎಂದು ತಿಳಿಸಿದ ಪ್ರಮೋದ್ ಯಾವ ರೀತಿಯ ಭದ್ರತೆ ಕೊಡೋದು ಬಿಡೋದು ಸರ್ಕಾರಕ್ಕೆ ಬಿಟ್ಟದ್ದು ಎಂದು ಹೇಳಿದರು.
You must be logged in to post a comment Login