Connect with us

    LATEST NEWS

    ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

    ಉಡುಪಿ ಫೆಬ್ರವರಿ 17: ಬಾವಿಗೆ ಆಕಸ್ಮಿಕವಾಗಿ ಬಿದ್ದ ಮಹಿಳೆಯನ್ನು ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ಇಂದು ಉಡುಪಿ ಜಿಲ್ಲೆಯ ತೆಕ್ಕಟ್ಟೆ ಸಮೀಪದ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.

    ಇಲ್ಲಿನ ನಿವಾಸಿ ರತ್ನಾವತಿ ಶೆಟ್ಟಿ ಉಳ್ತೂರು (52) ಬಾವಿಗೆ ಬಿದ್ದು ರಕ್ಷಿಸಲ್ಪಟ್ಟವರು. ಇವರು ಬೆಳಗ್ಗೆ ಬಾವಿಯಿಂದ ನೀರೆತ್ತುವಾಗ ಆಕಸ್ಮಿಕ ಕಾಲು ಜಾರಿ 20 ಅಡಿ ಆಳದ ಬಾವಿಗೆ ಬಿದ್ದಿದ್ದಾರೆ. ತಕ್ಷಣ ಮನೆಯವರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನಾಗರಾಜ್ ಪೂಜಾರಿ ಬಾವಿಗೆ ಇಳಿದು, ಮಹಿಳೆಯನ್ನು ರಕ್ಷಿಸಿದ್ದಾರೆ. ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

     

    ಕಾರ್ಯಾಚರಣೆಯಲ್ಲಿ ಕುಂದಾಪುರ ಅಗ್ನಿಶಾಮಕ ದಳ ಠಾಣಾಧಿಕಾರಿ ಬಾಬು ಶೆಟ್ಟಿ, ಪ್ರಮುಖ ಅಗ್ನಿಶಾಮಕ ರವೀಂದ್ರ ದೇವಾಡಿಗ, ಸಿಬ್ಬಂದಿಯಾದ ಆಸಿಫ್, ಸಂತೋಷ ಶೆಟ್ಟಿ, ಅಗ್ನಿಶಾಮಕ ವಾಹನ ಚಾಲಕ‌ ಮುಸ್ತಫ, ಸ್ಥಳೀಯರು ಸಹಕರಿಸಿದ್ದರು.

     

    Share Information
    Advertisement
    Click to comment

    You must be logged in to post a comment Login

    Leave a Reply