Connect with us

LATEST NEWS

ಕೆಲವು ಸೆಕೆಂಡ್ ಗಳ ನಿದ್ರೆ ಮಂಪರು – ರಿಷಭ್ ಪಂತ್ ಕಾರು ಅಪಘಾತಕ್ಕೆ ಕಾರಣ

ನವದೆಹಲಿ ಡಿಸೆಂಬರ್ 30: ಕ್ರಿಕೆಟಿಗ ರಿಷಭ ಪಂತ್ ಅವರ ಕಾರು ಅಪಘಾತಕ್ಕೆ ಕಾರಣವೇನು ಎನ್ನುವುದು ಇದೀಗ ಬಹಿರಂಗಗೊಂಡಿದೆ. ಕೆಲವು ಸೆಕೆಂಡ್ ನಿದ್ರೆಗೆ ಜಾರಿದ್ದರಿಂದ ಈ ಅಪಘಾತ ಸಂಭವಿಸಿದೆ.


ಉತ್ತರಾಖಂಡ್ ಪೊಲೀಸರು ಅಪಘಾತಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡಿದ್ದು, ಕಾರು ಅಪಘಾತವಾದಾಗ ಪಂತ್ ಒಬ್ಬರೇ ಕಾರಿನಲ್ಲಿದ್ದರು ಹಾಗೂ ಕಾರು ಚಾಲನೆಯಲ್ಲಿದ್ದಾಗ ಅವರು ನಿದ್ದೆಗೆ ಜಾರಿದ್ದೇ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಲು ಪ್ರಮುಖ ಕಾರಣ ಎಂದು ಹೇಳಿದ್ದಾರೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಬಿಎಂಡಬ್ಲ್ಯು ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಬಳಿಕ ಎರಡು ಬಾರಿ ಪಲ್ಟಿಯಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಕೆಲವು ಸೆಕೆಂಡ್ ಗಳು ನಿದ್ದೆ ಮಂಪರು ಆವರಿಸಿದ್ದರ ಪರಿಣಾಮ ಕಾರಿನ ನಿಯಂತ್ರಣ ಕಳೆದುಕೊಂಡೆ, ಎಂದು ಸ್ವತಃ ಪಂತ್ ಪೊಲೀಸರಿಗೆ ತಿಳಿಸಿದ್ದಾರೆ” ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ. ಅಪಘಾತಕ್ಕೀಡಾದ ಬೆನ್ನಲ್ಲೇ ಬೆಂಕಿ ಹೊತ್ತಿಕೊಂಡಿದ್ದ ಬಿಎಂಡಬ್ಲ್ಯುಕಾರಿನ ಗಾಜು ಒಡೆದು ಪಂತ್ ಹೊರಬಂದಿದ್ದರು. ಬೆಂಕಿಯಿಂದಾಗಿ ಅವರ ಬೆನ್ನು ಸಂಪೂರ್ಣವಾಗಿ ಸುಟ್ಟುಹೋಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *