LATEST NEWS
ವರಾಹ ರೂಪಂ ಕೇಸ್ ಗೆದ್ದು.. ಆನೆಗುಡ್ಡೆ ಶ್ರೀವಿನಾಯಕ ದರ್ಶನ ಪಡೆದ ರಿಷಬ್ ಶೆಟ್ಟಿ
ಕುಂದಾಪುರ, ಡಿಸೆಂಬರ್ 5: ಕಾಂತಾರ ಸಿನೆಮಾ ಬಿಡುಗಡೆಯಾಗಿ 50 ದಿನ ಪೂರೈಸಿ ಇನ್ನೂ ಭರ್ಜರಿಯಾಗಿ ಪ್ರದರ್ಶನವಾಗುತ್ತಿದೆ. ಈ ನಡುವೆ ಟೆಂಪಲ್ ರನ್ ಮುಂದುವರೆಸಿರುವ ರಿಷಬ್ ಶೆಟ್ಟಿ ಇಂದು ಕುಂದಾಪುರದ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕಾಂತಾರ ಸಿನೆಮಾ ಸಕ್ಸಸ್ ಆಗುತ್ತಿದ್ದಂತೆ ವಿವಾದಕ್ಕೆ ಕಾರಣವಾಗಿದ್ದ ಸಿನೆಮಾದ ಹಾಡು ವರಾಹ ರೂಪಂ ನ ಕೋರ್ಟ್ ಕೇಸ ನ್ನು ಚಿತ್ರ ತಂಡ ಗೆದ್ದಿದ್ದು, ಮತ್ತೆ ಹಾಡು ಸಿನೆಮಾದಲ್ಲಿ ಕಾಣಿಸಿಕೊಂಡಿದೆ. ಭಾರೀ ಯಶಸ್ಸು ಕಂಡ ‘ಕಾಂತಾರ’ ಚಿತ್ರದ ಮುಹೂರ್ತ ಸಮಾರಂಭ ಇದೇ ಆನೆಗುಡ್ಡೆ ದೇವಸ್ಥಾನದಲ್ಲಿ ನಡೆದಿತ್ತು, ಹಿನ್ನಲೆ ರಿಷಬ್ ಶೆಟ್ಟ ದಂಪತಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ಯಾನ್ ಇಂಡಿಯಾ ಸ್ಟಾರ್ ರಿಷಬ್ ಶೆಟ್ಟಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಂತೆ ದೇವಸ್ಥಾನದ ವತಿಯಿಂದ ಅದ್ದೂರಿ ಸ್ವಾಗತ ಮಾಡಲಾಯಿತು. ರಿಷಬ್ ಶೆಟ್ಟಿ ಆನೆಗುಡ್ಡೆ ದೇವಸ್ಥಾನದಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
You must be logged in to post a comment Login