Connect with us

LATEST NEWS

ತಾನು ಓದಿದ ಕೆರಾಡಿಯ ಸರಕಾರಿ ಶಾಲೆಯನ್ನು ದತ್ತು ತೆಗೆದುಕೊಂಡ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

ಕುಂದಾಪುರ ಡಿಸೆಂಬರ್ 17: ಕಾಂತಾರ ಮೂಲಕ ಕೆರಾಡಿಯ ಊರನ್ನು ಇಡೀ ವಿಶ್ವಕ್ಕೆ ತಿಳಿಸುವಂತೆ ಮಾಡಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ತಮ್ಮ ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ತಾನು ಕಲಿತ ಸರಕಾರಿ ಕನ್ನಡ ಶಾಲೆಯನ್ನು ದತ್ತು ತೆಗೆದುಕೊಂಡಿದ್ದಾರೆ.


ಕೆರಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗೆ ಭೇಟಿನೀಡಿ ಕನ್ನಡ ಶಾಲೆ ಉಳಿಸುವ ಮತ್ತು ಬೆಳೆಸುವ ತನ್ನ ಕನಸನ್ನು ಬಿಚ್ಚಿಟ್ಟರು. ಈ ಸಂದರ್ಭದಲ್ಲಿ ಊರ ಪ್ರಮುಖರು,ಹಿರಿಯರು ಉಪಸ್ಥಿತರಿದ್ದು ಹುಟ್ಟೂರಿನ ಶಾಲೆಯ ದತ್ತು ರಿಷಬ್ ಶೆಟ್ಟಿಯವರನ್ನು ಅಭಿನಂದಿಸಿದರು.


ಕನ್ನಡ ಶಾಲೆ ಉಳಿಸಿ ಅಭಿಯಾನದ ಅಂಗವಾಗಿ ರಿಷಭ್ ಶೆಟ್ಟಿ ಫೌಂಡೇಶನ್ ಮೂಲಕ ರಿಷಬ್ ಶೆಟ್ಟಿ ತನ್ನ ಹುಟ್ಟೂರಾದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದಿದ್ದಾರೆ. ಈ ಸಂದರ್ಭದಲ್ಲಿ ಊರ ಪ್ರಮುಖರು,ಹಿರಿಯರು ಉಪಸ್ಥಿತರಿದ್ದು ಹುಟ್ಟೂರಿನ ಶಾಲೆಯ ದತ್ತು ರಿಷಬ್ ಶೆಟ್ಟಿಯವರನ್ನು ಅಭಿನಂದಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕ್ಷೇತ್ರದಲ್ಲಿ ನೂರಾರು ಶಾಲೆಗಳು ಅಭಿವೃದ್ಧಿಯಾಗಿ, ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಎನ್ನುವುದೇ ಸಮೃದ್ಧ ಬೈಂದೂರಿನ ಪರಿಕಲ್ಪನೆಯಾದ 300 ಟ್ರೀಸ್ ಆಶಯ. ಕನ್ನಡ ಶಾಲೆ ಉಳಿಸಿ ಅಭಿಯಾನದ ಅಂಗವಾಗಿ ರಿಷಭ್ ಶೆಟ್ಟಿ ಫೌಂಡೇಶನ್ ಮೂಲಕ ಕಾಂತಾರಾ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಹುಟ್ಟೂರಾದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದಿರುವುದು ನಮ್ಮ ಸಮೃದ್ಧ ಬೈಂದೂರಿನ ಆಶಯಕ್ಕೆ ಮತ್ತೊಂದು ಗರಿ. ಧನ್ಯವಾದಗಳು ಸರ್ ಎಂದಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *