Connect with us

    FILM

    ನಿರ್ಮಾಪಕ ಸೂರಪ್ಪ ಬಾಬು ಕುಟುಂಬಕ್ಕೆ ರಸ್ತೆ ಅಪಘಾತ: ಅಪಾಯದಿಂದ ಪಾರು!

    ಬೆಂಗಳೂರು, ಜೂನ್ 26: ಸೂರಪ್ಪ ಬಾಬು ಮತ್ತು ಕುಟುಂಬದವರು ದೇವಸ್ಥಾನಕ್ಕೆಂದು ತೆರಳುತ್ತಿರುವ ಸಂದರ್ಭದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಇಂದು (ಜೂನ್ 26) ಬೆಳಗ್ಗಿನ ಜಾವ ಈ ಘಟನೆ ನಡೆದಿದೆ.

    ತಮಿಳುನಾಡಿನಲ್ಲಿರುವ ಬ್ರಹ್ಮ ದೇವಸ್ಥಾನಕ್ಕೆ ಸೂರಪ್ಪ ಬಾಬು ಮತ್ತು ಕುಟುಂಬ ಹೊರಟಿತ್ತು. ದೇವಸ್ಥಾನಕ್ಕೆಂದು ಇಂದು (ಜೂನ್ 26) ಬೆಳ್ಳಂಬೆಳಗ್ಗೆ ಮನೆಯಿಂದ ಹೊರಟ ಸೂರಪ್ಪ ಬಾಬು ಕುಟುಂಬ, ಪ್ರಯಾಣ ಬೆಳೆಸಿದ್ದ ವಾಹನಕ್ಕೆ ಆಕ್ಸಿಡೆಂಟ್ ಆಗಿದೆ. ಮುಂಜಾನೆ 3:00 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಹೊಸೂರು ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಆದರೆ ಸೂರಪ್ಪ ಬಾಬು ಮತ್ತು ಕುಟುಂಬಸ್ಥರಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ. ಅದೃಷ್ಟವಶಾತ್ ಸೂರಪ್ಪಬಾಬು ಕುಟುಂಬದವರೆಲ್ಲರೂ ಕ್ಷೇಮವಾಗಿ ಹಿಂದಿರುಗಿದ್ದಾರೆ.

    ಅಪಘಾತ ದೊಡ್ಡ ಮಟ್ಟದಲ್ಲಿ ಆಗಿದ್ದರೂ ಕುಟುಂಬಸ್ಥರಿಗೆ ಯಾವುದೇ ತೊಂದರೆ ಆಗಿಲ್ಲ. ಆದರೆ ಮುಂದೆ ಕುಳಿತಿದ್ದ ಸೂರಪ್ಪ ಬಾಬು ಅವರ ಕಾಲಿಗೆ ಕೊಂಚ ಪೆಟ್ಟು ಬಿದ್ದಿದೆ. ಹಾಗಾಗಿ ಅಲ್ಲಿಂದ ಬೆಂಗಳೂರಿಗೆ ಹಿಂದಿರುಗಿದ್ದಾರೆ. ಸೂರಪ್ಪಬಾಬು ಮತ್ತು ಕುಟುಂಬ ಆಸ್ಪತ್ರೆಗೆ ಧಾವಿಸಿದ್ದಾರೆ. ಸದ್ಯ ಸೂರಪ್ಪ ಬಾಬು ಅವರು ಕೂಡ ಆರಾಮಾಗಿ ಇದ್ದು ಅವರ ಕಾಲಿಗೆ ಬ್ಯಾಂಡೇಜ್ ಹಾಕಲಾಗಿದೆ ಅಂತೆ.

    ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸೂರಪ್ಪ ಬಾಬು “ಇಂದು (ಜೂನ್ 26) ಬೆಳಗ್ಗೆ ನಾವು ದೇವಸ್ಥಾನಕ್ಕೆಂದು ಬೆಂಗಳೂರಿನಿಂದ ಹೊರಟಿದ್ದೆವು. ಆದರೆ ರಸ್ತೆಯಲ್ಲಿ ದೊಡ್ಡ ಅಪಘಾತ ಸಂಭವಿಸಿತ್ತು. ಇನೋವಾ ಕಾರನ್ನು ಬುಕ್ ಮಾಡಿಕೊಂಡು ಹೊರಟಿದ್ದೆವು. ಮೂರು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಆದರೆ ಕುಟುಂಬಸ್ಥರು ಎಲ್ಲರೂ ಆರಾಮಾಗಿದ್ದಾರೆ. 7 ಜನ ಪ್ರಯಾಣ ಮಾಡುತ್ತಿದ್ದೆವು. ಯಾರಿಗೂ ಏನೂ ತೊಂದರೆ ಆಗಿಲ್ಲ. ನನ್ನ ಕಾಲಿಗೆ ಸ್ವಲ್ಪ ಪೆಟ್ಟು ಬಿದ್ದಿದ್ದು ಕಾಲಿಗೆ ಬ್ಯಾಂಡೇಜ್ ಹಾಕಿಸಿಕೊಂಡಿದ್ದೇನೆ. ನಾನು ಕೂಡ ಈಗ ಆರಾಮಾಗಿ ಇದ್ದೇನೆ. ಕೆಲವು ದಿನಗಳು ಬೆಡ್ ರೆಸ್ಟ್ ತೆಗೆದುಕೊಳ್ಳಲು ಡಾಕ್ಟರ್ ಹೇಳಿದ್ದಾರೆ.” ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply