Connect with us

    LATEST NEWS

    ರಸ್ತೆ ದಾಟುವ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು

    ಉಡುಪಿ ಸೆಪ್ಟೆಂಬರ್ 07:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಪುತ್ತೂರು ಗ್ರಾಮದ ಅಂಬಾಗಿಲಿನಲ್ಲಿರುವ ಅಮೃತ್‌ಗಾರ್ಡನ್‌ ಮುಂಭಾಗ ನಡೆದಿದೆ.


    ಮೃತರನ್ನು ವಸಂತಿ ಎಂದು ಗುರುತಿಸಲಾಗಿದ್ದು, ಇವರು ಅಮೃತ್‌ಗಾರ್ಡನ್‌ ವಿವಾಹ ಸಮಾರಂಭಕ್ಕೆ ಆಗಮಿಸಿದ್ದರು, ಈ ಸಂದರ್ಭ ವಸಂತಿ ಅವರು ಹೆದ್ದಾರಿ ದಾಟುತ್ತಿದ್ದಾಗ ರಸ್ತೆಯ ಮಧ್ಯದಲ್ಲಿರುವ ಡಿವೈಡರ್‌ ಬಳಿಗೆ ತಲುಪುವಷ್ಟರಲ್ಲಿ ಕುಂದಾಪುರ ಕಡೆಯಿಂದ ಉಡುಪಿಗೆ ವೇಗವಾಗಿ ಬರುತ್ತಿದ್ದ ಬಸ್‌ ಢಿಕ್ಕಿ ಹೊಡೆದಿದೆ. ಪರಿಣಾಮ ತಲೆ, ಕೈ ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನಪ್ಪಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply