Connect with us

    LATEST NEWS

    ಬರೋಬ್ಬರಿ 65 ವರ್ಷಗಳ ನಂತರ ಕೊಂಗೂರಿಗೆ ರಸ್ತೆ – ಶಾಸಕರ ಕಾರ್ಯಕ್ಕೆ ಸ್ಥಳೀಯರ ಹರ್ಷ

    ಮಂಗಳೂರು ಮಾರ್ಚ್ 15: ಪದವು ಸೆಂಟ್ರಲ್ ವಾರ್ಡಿನ ಹಲವು ದಶಕಗಳ ಪ್ರಮುಖ ಬೇಡಿಕೆಯಾಗಿದ್ದ ಕೊಂಗೂರಿನಿಂದ ಶಕ್ತಿನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು 58 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.

    ನಂತರ ಮಾತನಾಡಿದ ಶಾಸಕರು, ಕಳೆದ 65 ವರ್ಷಗಳಿಂದ ಇಲ್ಲಿನ ಸ್ಥಳೀಯರು ರಸ್ತೆಯಿಲ್ಲದೇ ಅನುಭವಿಸುತ್ತಿದ್ದ ತೊಂದರೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯ ಕಿಶೋರ್ ಕೊಟ್ಟಾರಿಯವರು ನಮ್ಮ ಗಮನಕ್ಕೆ ತಂದಿದ್ದರು. ಆದರೆ ಮುಖ್ಯವಾಗಿ ಈ ಪ್ರದೇಶವು ರೈಲ್ವೆ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿದ್ದರಿಂದ ರಸ್ತೆ ನಿರ್ಮಾಣಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ನಂತರ, ಸಂಸದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ನಿರಂತರವಾಗಿ ರೈಲ್ವೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಅನೇಕ ಸುತ್ತಿನ ಸಭೆ ನಡೆಸಿ, ಸತತ ಪ್ರಯತ್ನದ ನಂತರ ಇಲ್ಲಿ ರಸ್ತೆ ನಿರ್ಮಿಸಲಾಗಿದ್ದು ಕೊಂಗೂರು ನಿವಾಸಿಗಳು ಮಣ್ಣಿನ ರಸ್ತೆಯಿಂದ ಅನುಭವಿಸುತ್ತಿದ್ದ ಭವಣೆಗೆ ಶಾಶ್ವತ ಪರಿಹಾರ ಸಿಕ್ಕಂತಾಗಿದೆ ಎಂದು ಹೇಳಿದರು.

    ಕಳೆದ 65 ವರ್ಷಗಳಿಂದ ಇಲ್ಲಿಗೆ ಸಮರ್ಪಕ ರಸ್ತೆಯಿಲ್ಲದೇ ಸ್ಥಳೀಯ ನಿವಾಸಿಗಳಾದ ನಾವು ಅನುಭವಿಸುತ್ತಿದ್ದ ಸಂಕಷ್ಟ ಅದರಲ್ಲೂ ಮಳೆಗಾಲದಲ್ಲಂತೂ ಹೇಳತೀರದಾಗಿತ್ತು. ಅನೇಕ ಮನವಿಗಳ ನಂತರವೂ ರಸ್ತೆ ನಿರ್ಮಾಣ ಸಾಧ್ಯವಾಗದ ಕಾರಣ ಆಸಕ್ತಿಯನ್ನೇ ಕಳೆದುಕೊಂಡಿದ್ದೆವು. ಕೊನೆಗೂ ಶಾಸಕ ವೇದವ್ಯಾಸ್ ಕಾಮತ್ ಅವರು ಈ ಹಿಂದೆ ನೀಡಿದ್ದ ಭರವಸೆಯಂತೆ ರಸ್ತೆ ನಿರ್ಮಾಣವಾಗಿದ್ದು, ವಿಶೇಷ ಮುತುವರ್ಜಿ ವಹಿಸಿದ ಸ್ಥಳೀಯ ಪಾಲಿಕೆ ಸದಸ್ಯ ಕಿಶೋರ್ ಕೊಟ್ಟಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೂ ನಾವು ಸದಾ ಚಿರಋಣಿ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply