Connect with us

DAKSHINA KANNADA

ರಸ್ತೆ ಸರಿಮಾಡಲು ಹಾರೆ ಹಿಡಿದ ಮಕ್ಕಳು..ಹಾಳಾದ ರಸ್ತೆ ವೀಕ್ಷಿಸಿ ದುರಸ್ಥಿಗೆ ಸೂಚಿಸಿದ ನ್ಯಾಯಾಧೀಶರು…!!

ಸುಳ್ಯ: ಶಾಲೆಗೆ ತೆರಳು ರಸ್ತೆಯಲ್ಲಿ ದುರಸ್ಥಿ ಮಾಡಲು ಹಾರೆ ಹಿಡಿದಿದ್ದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಹಾಳಾದ ರಸ್ತೆಯ ಪ್ರದೇಶಕ್ಕೆ ಸುಳ್ಯ ಹಿರಿಯ ಸಿವಿಲ್ ನ್ಯಾಯಾಲಯ ನ್ಯಾಯಾಧೀಶ ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ರಸ್ತೆ ಸಮಸ್ಯೆ ನಿವಾರಿಸಬೇಕು ಎಂದು ತಾಕೀತು ಮಾಡಿದ್ದಾರೆ.


ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮಂಡೇಪು ಎಂಬಲ್ಲಿ ಹದಗೆಟ್ಟ ರಸ್ತೆಯನ್ನು ಸಂತೋಷ್ ಮತ್ತು ಕೇಶವ ಎಂಬುವರ ಮಕ್ಕಳಾದ 2ನೇ ತರಗತಿಯ ವಲ್ಲೀಶ ರಾಮ ಮತ್ತು ತನ್ವಿ ಹಾರೆ ಹಿಡಿದು ಶ್ರಮದಾನ ಮಾಡಿದ್ದರು, ಈ ಮಕ್ಕಳ ಪೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆ ಸ್ಥಳಕ್ಕೆ ಸುಳ್ಯ ಹಿರಿಯ ಸಿವಿಲ್ ನ್ಯಾಯಾಲಯ ನ್ಯಾಯಾಧೀಶ ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ಪರಿಸ್ಥಿತಿಯನ್ನು ಅವಲೋಕಿಸಿದ ಅವರು, ವಿದ್ಯಾರ್ಥಿಗಳ ಕೈಯಲ್ಲಿ ಹಾರೆ ನೀಡಿದ್ದಕ್ಕಾಗಿ ಪೋಷಕರನ್ನು ಪ್ರಶ್ನಿಸಿದರು.

ನಂತರ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ನ್ಯಾಯಾಧೀಶರು ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಅವರನ್ನು ಪ್ರಶ್ನಿಸಿದರು. ಮಕ್ಕಳಿಂದ ಕೆಲಸ ಮಾಡಿಸಿದ ಪೋಷಕರು, ರಸ್ತೆಯ ದುರಸ್ತಿ ಮಾಡಿಸದ ಪಂಚಾಯಿತಿ ಅಧ್ಯಕ್ಷ ಮತ್ತು ಪಿಡಿಒ ಮೇಲೆ ಹಾಗೂ ಮಕ್ಕಳ ಬಗ್ಗೆ ನಿಗಾ ವಹಿಸದ ಶಾಲಾ ಶಿಕ್ಷಕರ ಮೇಲೆ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಧೀಶರು, ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಆಂಜನೇಯ ರೆಡ್ಡಿ ಅವರಿಗೆ ಸೂಚನೆ ನೀಡಿದರು. ‘ಪ್ರಕರಣ ದಾಖಲಿಸುವುದು ಬೇಡ. ರಸ್ತೆ ದುರಸ್ತಿ ಮಾಡಿಸೋಣ’ ಎಂದು ಸಬ್‌ ಇನ್‌ಸ್ಪೆಕ್ಟರ್ ಹೇಳಿದಾಗ, ಅದಕ್ಕೆ ಒಪ್ಪಿದ ನ್ಯಾಯಾಧೀಶರು, ‘ತಕ್ಷಣ ದುರಸ್ತಿ ಮಾಡಿ, ಅದರ ಚಿತ್ರ ಮತ್ತು ವರದಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *