ಮಂಗಳೂರು ಫೆಬ್ರವರಿ 11: ಮಂಗಳೂರು ತಾಲೂಕಿನ ಬಜಪೆ-ಎಡಪದವು ವ್ಯಾಪ್ತಿಯ ಮಚ್ಚೂರು ಕ್ರಾಸ್ (ರಾಷ್ಟ್ರೀಯ ಹೆದ್ದಾರಿ 169) ಬಳಿ ಕಾಮಗಾರಿ ನಡೆಯುತಿದ್ದು, ದಿನಾಂಕ 12-02-2026 ರಿಂದ 13-03-2026 ರವರೆಗೆ (30 ದಿನ) ಈ ಅವಧಿಯಲ್ಲಿ ಸಾರ್ವಜನಿಕರು ಬದಲಿ ರಸ್ತೆಗಳನ್ನು ಉಪಯೋಗಿಸಿ ಸಹಕರಿಸಲು ಮಂಗಳೂರು ನಗರ ಪೊಲೀಸ್ ಇಲಾಖೆ ಮನವಿ ಮಾಡಿದೆ.

*ಮೂಡುಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಬರುವಂತಹ ಲಾರಿಗಳು ವಿದ್ಯಾಗಿರಿ ಮುಲ್ಕಿ ಕ್ರಾಸ್ನಲ್ಲಿ ಬಲಕ್ಕೆ ತಿರುಗಿ ಕಿನ್ನಿಗೋಳಿ ರಸ್ತೆಯಲ್ಲಿ ಸಂಚರಿಸಿ ಪಕ್ಷಿಕೆರೆ ಕ್ರಾಸ್ ನಲ್ಲಿ ಬಲಕ್ಕೆ ತಿರುಗಿ ಮುಲ್ಕಿ ಜಂಕ್ಷನ್ – ಸುರತ್ಕಲ್ ಮೂಲಕ ಮಂಗಳೂರು ಕಡೆಗೆ ಸಂಚರಿಸುವುದು ಹಾಗೂ ಮಂಗಳೂರು ಕಡೆಯಿಂದ ಮೂಡುಬಿದಿರೆ ಕಡೆಗೆ ಸಂಚರಿಸುವ ಲಾರಿಗಳು ಇದೇ ರಸ್ತೆಯಲ್ಲಿ ಸಂಚರಿಸುವಂತೆ ಆಯುಕ್ತರು ತಿಳಿಸಿದ್ದಾರೆ.
*ಮೂಡುಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಇತರ ಎಲ್ಲಾ ಲಘುವಾಹನಗಳು ವಿದ್ಯಾಗಿರಿ ಮುಲ್ಕಿ ಕ್ರಾಸ್ನಲ್ಲಿ ಬಲಕ್ಕೆ ತಿರುಗಿ ಕಿನ್ನಿಗೋಳಿ ರಸ್ತೆಯಲ್ಲಿ ಸಂಚರಿಸಿ ಮೂರುಕಾವೇರಿ- ಕಟೀಲು-ಪೆರ್ಮುದೆ-ಬಜ್ಪೆ ಮೂಲಕ ಅಥವಾ ಪಕ್ಷಿಕೆರೆ ಕ್ರಾಸ್ನಲ್ಲಿ ಎಡಕ್ಕೆ ತಿರುಗಿ ಹಳೆಯಂಗಡಿ- ಸುರತ್ಕಲ್ ಮೂಲಕ ಮಂಗಳೂರು ಕಡೆಗೆ ಸಂಚರಿಸಬೇಕು. ಮಂಗಳೂರು ಕಡೆಯಿಂದ ಮೂಡುಬಿದಿರೆ ಕಡೆಗೆ ಸಂಚರಿಸುವ ಇತರ ಎಲ್ಲಾ ಲಘು ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿದೆ.
*ಮೂಡುಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಬರುವ ಸಾರ್ವಜನಿಕ ರೂಟ್ ಬಸ್ಸುಗಳು ಮತ್ತು ಸ್ಥಳೀಯರ ಲಘು ವಾಹನಗಳು ಮಾತ್ರ ದಡ್ಡಿ ಕ್ರಾಸ್ ಬಳಿ ಬಲಕ್ಕೆ ತಿರುಗಿ – ಪುಮಾರ್ ಪದವು ಕ್ರಾಸ್ – ಮಂಜನ ಕಟ್ಟೆ ಕ್ರಾಸ್ – ಅರ್ಜುನಕೋಡಿ – ಈಶ್ವರಕಟ್ಟೆ ಕ್ರಾಸ್ – ಮುಚ್ಚೂರು ಕ್ರಾಸ್ ಬಳಿ ಬಲಕ್ಕೆ ತಿರುಗಿ ಕೈಕಂಡ ಗುರುಪುರ ಮೂಲಕ ಮಂಗಳೂರು ಕಡೆಗೆ ಸಂಚರಿಸುವುದು.
*ಮಂಗಳೂರು ಕಡೆಯಿಂದ ಗುರುಪುರ-ಕೈಕಂಬ ಮೂಲಕ ಮೂಡುಬಿದಿರೆ ಕಡೆಗೆ ಹೋಗುವ ಸಾರ್ವಜನಿಕ ರೂಟ್ ಬಸ್ಸುಗಳು ಮತ್ತು ಸ್ಥಳೀಯರ ಲಘು ವಾಹನಗಳು ಮಾತ್ರ ಗಂಜಿಮಠದಿಂದ ಮುಂದೆ ಮುಚ್ಚೂರು ಕ್ರಾಸ್ ಬಳಿ ಎಡಕ್ಕೆ ತಿರುಗಿ ಈಶ್ವರಕಟ್ಟೆ ಕ್ರಾಸ್-ಅರ್ಜುನಕೋಡಿ – ಮಂಜನ ಕಟ್ಟೆ ಕ್ರಾಸ್ -ಪುಮಾರ್ ಪದವು ಕ್ರಾಸ್- ದಡ್ಡಿ ಕ್ರಾಸ್ ಬಳಿ ಎಡಕ್ಕೆ ಸಂಚರಿಸಿ ಮೂಡಬಿದ್ರೆ ಕಡೆಗೆ ಹೋಗಬೇಕು.
*ಮಂಗಳೂರು ಕಡೆಯಿಂದ ಮೂಡುಬಿದಿರೆ ಮೂಲಕ -ಕಾರ್ಕಳ ಕಡೆಗೆ ಸಂಚರಿಸುವ ಎಲ್ಲಾ ಲಾರಿಗಳು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುರತ್ಕಲ್-ಮುಲ್ಕಿ-ಪಡುಬಿದ್ರೆಯಿಂದಾಗಿ ಕಾರ್ಕಳ ಕಡೆಗೆ ಸಂಚರಿಸುವುದು.ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿಎಚ್ ತಿಳಿಸಿದ್ದಾರೆ.