Connect with us

    LATEST NEWS

    ಚಿಕನ್ ಅಂಗಡಿ ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ – ಇಬ್ಬರು ರೌಡಿ ಶೀಟರ್ ಅರೆಸ್ಟ್

    ಮಂಗಳೂರು ಎಪ್ರಿಲ್ 11: ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ ನಡೆಸಿದ ಅಂಗಡಿ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದ ಮೇಲೆ ಇಬ್ಬರು ರೌಡಿ ಶೀಟರ್ ಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
    ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಗಳನ್ನು ರೌಡಿ ಶೀಟರ್ ಗಳಾದ ಮಂಗಳೂರು ಜಲ್ಲಿಗುಡ್ಡೆ ಬಜಾಲ್ ನಿವಾಸಿ ಪ್ರೀತಮ್ ಪೂಜಾರಿ (27 ), ಎಕ್ಕೂರು ನಿವಾಸಿ ಧೀರು ಯಾನೆ ಧೀರಜ್ ಕುಮಾರ್ ( 25) ಎಂದು ಗುರುತಿಸಲಾಗಿದೆ.


    ವೆಲೆನ್ಶಿಯಾ ಜಂಕ್ಷನ್ ಬಳಿಯ ಐಡಿಯಲ್ ಚಿಕನ್ ಅಂಗಡಿಯ ಮುಂಭಾಗದಲ್ಲಿ ಆರೋಪಿಗಳಿಬ್ಬರು ಸಾರ್ವಜನಿಕನೊಬ್ಬನಿಗೆ ಹಲ್ಲೆ ನಡೆಸುತ್ತಿದ್ದರು. ಇದನ್ನು ಅಂಗಡಿ ಸಿಬ್ಬಂದಿಗಳು ಪ್ರಶ್ನಿಸಿದಾಗ ಆರೋಪಿಗಳು ಅಂಗಡಿ ಸಿಬ್ಬಂದಿಗಳಾದ ಸುನಿಲ್ ಮಾರ್ಡಿ, ಅನಂತ ಮತ್ತು ಜೀವನ್ ಎಂಬವರಿಗೆ ಹೆಲ್ಮೆಟ್, ಕಲ್ಲುಗಳಿಂದ ಹೊಡೆದು ಗಾಯಗೊಳಿಸಿದ್ದು, ಬಳಿಕ ಸಿಬ್ಬಂದಿಗೆ ಚೂರಿಯಿಂದ ಇರಿಯಲು ಹೋದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ತಡೆದಿದ್ದಾರೆ.
    ಆರೋಪಿಗಳಿಂದ ಎರಡು ಚೂರಿಗಳೂ, ಕಲ್ಲು, ಹೆಲ್ಮೆಟ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ವೈದ್ಯಕೀಯ ತಪಾಸಣೆ ವೇಳೆಗೆ ಇಬ್ಬರೂ ಮದ್ಯಸೇವನೆ ಮಾಡಿರುವುದು ಮತ್ತು ಪ್ರೀತಮ್ ಗಾಂಜಾ ಸೇವನೆ ಮಾಡಿರುವುದು ಪತ್ತೆಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply