Connect with us

    DAKSHINA KANNADA

    ರೌಡಿಶೀಟರ್ ಪವನ್ ರಾಜ್ ಮರ್ಡರ್, ಆರೋಪಿಗಳು ಅಂದರ್

    ಮಂಗಳೂರು ,ಜುಲೈ 26 : ಮಂಗಳೂರಿನ ಹೊರವಲಯದ ವಾಮಂಜೂರಿನಲ್ಲಿ ನಡೆದ ರೌಡಿಶೀಟರ್ ಪವನ್ ರಾಜ್ ಶೆಟ್ಟಿ ಕೊಲೆ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳಲ್ಲಿ ಪೋಲೀಸರು ಬಂಧಿಸಿದ್ದಾರೆ. ಜುಲೈ 24 ರ ಮಧ್ಯರಾತ್ರಿ ಈ ಕೊಲೆ ನಡೆದಿದ್ದು, ವಾಮಂಜೂರಿನ ಕುಟ್ಟಿಪಲ್ಕೆ ಲೇ ಔಟ್ ಬಳಿ ಆತನ ಶವ ಪತ್ತೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ ಮಂಗಳೂರು ಗ್ರಾಮಾಂತರ ಪೋಲೀಸರು ಇದೀಗ ಹತ್ಯೆಗೆ ಸಂಬಂಧಿಸಿದಂತೆ 3 ಆರೋಪಿಗಳನ್ನು ಬಂಧಿಸಿದ್ದಾರೆ. ವಾಮಂಜೂರಿನ ಬಿಪಿನ್, ಶರಣ್ ಹಾಗೂ ಹರೀಶ್ ಪೋಲೀಸರಿಂದ ಬಂಧಿತರಾದ ಆರೋಪಿಗಳಾಗಿದ್ದಾರೆ. ಪವನ್ ರಾಜ್ ಕೊಲೆ ಮಾಡಿದ ಬಳಿಕ ಆರೋಪಿಗಳು ಹತ್ಯೆಗೆ ನಡೆಸಿದ ಲಾಂಗ್ ಮಚ್ಚುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು. ಕೊಲೆಯಾದ ಪವನ್ ರಾಜ್ ಶೆಟ್ಟಿ , ರೌಡಿ ಶೀಟರ್ ಆಗಿದ್ದು, ಈತನ ಮೇಲೆ ಹಲವು ಕೊಲೆಯತ್ನ ಪ್ರಕರಣಗಳು ದಾಖಲಾಗಿತ್ತು. ಪವನ್ ರಾಜ್ ಶೆಟ್ಟಿ ಈ ಹಿಂದೆ ಕೊಲೆಯಾಗಿದ್ದ ವಾಮಂಜೂರು ರೋಹಿ ಮಗನಾಗಿದ್ದು, ತನ್ನ ತಂದೆಯ ಕೊಲೆ ನಡೆಸಿದವರನ್ನು ಮುಗಿಸುವುದಾಗಿ ಹೇಳಿಕೊಂಡಿದ್ದನು. ಪೋಲೀಸರು ವಶಪಡಿಸಿಕೊಂಡ ಆರೋಪಿಗಳೆಲ್ಲರೂ ವಾಮಂಜೂರಿನ ಸ್ಥಳಿಯರೇ ಆಗಿದ್ದು, ಕೊಲೆಗೆ ನಿಖರ ಕಾರಣ ಏನು ಎನ್ನುವುದು ಪೋಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

     

     

    Share Information
    Advertisement
    Click to comment

    You must be logged in to post a comment Login

    Leave a Reply