Connect with us

DAKSHINA KANNADA

ಗೌರಿ ಲಂಕೇಶ್ ಹತ್ಯೆಯಲ್ಲಿ ಸಂಘಪರಿವಾರದ ಕೈವಾಡ : PUCL

ಮಂಗಳೂರು ಸೆಪ್ಟಂಬರ್ 8: ಗೌರಿ ಲಂಕೇಶ್ ಅವರನ್ನು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ಖಂಡಿಸಿರುವ ದಲಿತ ದಮನಿತ ಸ್ವಾಭಿಮಾನ ಹೋರಾಟ ಸಮಿತಿ, ಹತ್ಯೆಗೈದ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚುವಂತೆ ಸರಕಾರಕ್ಕೆ ಅಗ್ರಹಿಸಿದೆ.

ಈ ಮಂಗಳೂರಿನಲ್ಲಿ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಪಿಯುಸಿಎಲ್ ರಾಜ್ಯ ಉಪಾಧ್ಯಕ್ಷ ಪಿ.ಬಿ. ಡೇಸಾ ಪ್ರಗತಿಪರ ನೂತನ ಕ್ರಾಂತಿಗೆ ನಾಂದಿ ಹಾಡಿದವರು ಗೌರಿ ಲಂಕೇಶ್. ಅವರ ಕೊಲೆ ಪ್ರಕರಣದಲ್ಲಿ ಸಂಘ ಪರಿವಾರದ ಕೈವಾಡವಿಲ್ಲವೆಂದು ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು. ಆದರೆ ಯಾರ ಕೈವಾಡವಿದೆಯೆಂದು ಇಡೀ ದೇಶಕ್ಕೆ ತಿಳಿದಿದೆ.

ಕೊಲೆ ನಡೆದು ಎರಡು ದಿನಗಳಾದರೂ, ಆರೋಪಿಗಳ ಪತ್ತೆಯಾಗಿಲ್ಲ. ರಾಜ್ಯದಲ್ಲಿ ತುರ್ತು ಪರಿಸ್ಥಿತಿಗಿಂತ‌ ಕೆಟ್ಟದಾದ ಅಘೋಷಿತ ತುರ್ತು ಪರಿಸ್ಥಿತಿಯಲ್ಲಿದ್ದೇವೆ. ಡಾ. ಪ್ರಭಾಕರ್ ಭಟ್ ಕಲ್ಲಡ್ಕ, ಜಗದೀಶ್ ಶೇಣವರನ್ನು ಯಾವಾಗಲೋ ಬಂಧಿಸಬೇಕಿತ್ತು.

ಆದರೆ ರಾಜಕೀಯ ನಾಯಕರು ಬಾಯಲ್ಲಿ ಹೇಳುವುದು ಮಾತ್ರ. ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸ್ ಇಲಾಖೆ ಕೇಸರೀಕರಣವಾಗಿದೆ. ಆದರೆ ನಾವು ಗೌರಿ ಲಂಕೇಶ್ ಗೋಸ್ಕರ ಸಾಯಲು ತಯಾರಿದ್ದೇವೆ. ನಮಗೆ ಕಾಂಗ್ರೆಸ್, ಬಿಜೆಪಿಯಂತೆ ಎರಡು ನಾಲಗೆಯಿಲ್ಲ ಎಂದು ಟೀಕಿಸಿದರು.

ದಮನಿತ ಸ್ವಾಭಿಮಾನ ಹೋರಾಟ ಸಮಿತಿ ಮುಖಂಡ ರಘುವೀರ್ ಸೂಟರ್ ಪೇಟೆ ಮಾತನಾಡಿ, ಪ್ರಗತಿಪರ ಚಳುವಳಿಯಲ್ಲಿ ತೊಡಗಿಸಿಕೊಂಡು ಸೈದ್ಧಾಂತಿಕ ತಳಹದಿಯನ್ನು ತನ್ನ ಬರಹ ಮತ್ತು ಸಾಹಿತ್ಯದ ಮೂಲಕ ಚಳುವಳಿಯನ್ನು ಕಟ್ಟಿದವರು ಗೌರಿ ಲಂಕೇಶ್.                            ಆದರೆ ಅವರ ಸೈದ್ಧಾಂತಿಕ ವಿಚಾರಧಾರೆಗಳ ಬಗ್ಗೆ ಸಹಿಸದ ಶಕ್ತಿಗಳು ಸೈದ್ಧಾಂತಿಕ ಸಂಘರ್ಷಕ್ಕೆ ಮುಂದಾಗದೆ ಪೈಶಾಚಿಕವಾಗಿ ಹತ್ಯೆ ಮಾಡಿರುವುದು ತಮ್ಮ ಫ್ಯಾಸಿಸ್ಟ್ ಕ್ರೌರ್ಯವನ್ನು ಎತ್ತಿ ತೋರಿಸಿದ್ದಾರೆಂದು ಸಮಿತಿ ಆರೋಪಿಸಿದೆ. ಒಂದು ಗೌರಿ ಲಂಕೇಶ್ ಹತ್ಯೆಯಾದರೂ, ಅವರು ಪ್ರತಿಪಾದಿಸಿದ ಸಿದ್ಧಾಂತ, ವಿಚಾರಧಾರೆಗಳು ಯಾವತ್ತೂ ಸಾಯುವುದಿಲ್ಲ.

ಸರಕಾರ ಈ ಹತ್ಯೆಯ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸಿ ವಿಶೇಷ ಪ್ರಯತ್ನ ನಡೆಸಬೆಕೆಂದು, ಹೋರಾಟ ಸಮಿತಿ ಒತ್ತಾಯಿಸುತ್ತದೆ ಎಂದು ಹೇಳಿದರು. ಒಂದೆಡೆ ಗೌರಿ ಲಂಕೇಶ್ ಹತ್ಯೆಯಾದರೆ, ಮತ್ತೊಂದೆಡೆ ಉಡುಪಿ ಚಲೋ ನಡೆಸಿದ ದಲಿತ ದಮನಿತ ಸ್ವಾಭಿಮಾನ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಭಾಸ್ಕರ್ ಪ್ರಸಾದ್ ರಿಗೂ ದುಷ್ಕರ್ಮಿಗಳು ಜೀವ ಬೆದರಿಕೆ ಒಡ್ಡಿದ್ದಾರೆ.

ಪ್ರಗತಿಪರ ಚಳುವಳಿಯಲ್ಲಿ ತೊಡಗುವ ನಾಯಕರು ಗುರಿಯಾಗುತ್ತಿರುವುದು ಆತಂಕಕಾರಿ ಬೆಳವಣಿಯಾಗಿದ್ದು, ಸಾಮಾಜಿಕ ಕಾರ್ಯಕರ್ತರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ದಲಿತ ದಮನಿತ ಸ್ವಾಭಿಮಾನ ಹೋರಾಟ ಸಮಿತಿ ಒತ್ತಾಯಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *